ಉಡುಪಿ: ಇದು ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ದುರಂತ. ದೂರದಿಂದ ಆ್ಯಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್ ಗೇಟ್ನಲ್ಲಿದ್ದ ಮೂವರು ಆ್ಯಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್ಗಳನ್ನು ತೆಗೆದುಬಿಡುತ್ತಾರೆ.
ಅಷ್ಟರಲ್ಲೇ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗುತ್ತದೆ. ಈ ಸಂದರ್ಭದಲ್ಲಿ ಮೂವರು ಟೋಲ್ ಸಿಬ್ಬಂದಿಯ ಪೈಕಿ ಒಬ್ಬ ಆ್ಯಂಬುಲೆನ್ಸ್ ಹೊಡೆತ ಹಾಗೂ ಗೋಡೆಯ ಮಧ್ಯೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಹೀಗೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರು. ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಸಾವಿಗೀಡಾಗಿದ್ದಾರೆ. ರೋಗಿ ಪತ್ನಿ, ಆ್ಯಂಬುಲೆನ್ಸ್ನಲ್ಲಿದ್ದ ಸಂಬಂಧಿ ಕೂಡ ಸಾವಿಗೀಡಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಈ ಭಯಂಕರ ಅಪಘಾತ ಸಂಭವಿಸಿದೆ.
ಆ್ಯಂಬುಲೆನ್ಸ್ ತೀವ್ರ ಅಸ್ವಸ್ಥರನ್ನು ಕರೆದುಕೊಂಡು ಹೊನ್ನಾವರದಿಂದ ಕುಂದಾಪುರಕ್ಕೆ ಹೊರಟಿತ್ತು. ಈ ಅಪಘಾತದ ದೃಶ್ಯ ಟೋಲ್ಗೇಟ್ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್ ಗೇಟ್ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..
— Vijayavani (@VVani4U) July 20, 2022
ವಿವರಗಳಿಗೆ https://t.co/YaFZZchf1J ನೋಡಿ pic.twitter.com/BSfvSzHsKp
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!