ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 23 ಜನರಿಗೆ ಗಾಯಗೊಂಡಿದ್ದಾರೆ.
ಸವದತ್ತಿ-ಧಾರವಾಡ ರಸ್ತೆಯಲ್ಲಿ ಮಹಿಂದ್ರ ಬೊಲೆರೊ ಹಾಗೂ ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಟಾಟಾ ಏಸ್ನಲ್ಲಿದ್ದವರೆಲ್ಲ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಏಸ್ ವಾಹನದಲ್ಲಿದ್ದವರು ಮೃತಗೊಂಡಿದ್ದು, ಹೆಸರು-ವಿವರ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರೆಲ್ಲ ಚುಂಚನೂರ ಗ್ರಾಮಕ್ಕೆ ಸೇರಿದವರು ಎಂಬ ಮಾಹಿತಿ ಇದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್)