More

    ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು..

    ಹಾವೇರಿ: ರಾಜ್ಯದಲ್ಲಿ ಇಂದು ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ಸಂಭವಿಸಿದೆ.

    ಅಪಘಾತಕ್ಕೆ ಒಳಗಾದ ಕಾರುಗಳ ಪೈಕಿ ಒಂದು ಗುಜರಾತ್ ಮೂಲದ್ದಾಗಿದ್ದು, ಇನ್ನೊಂದು ಕೇರಳ ಮೂಲದ್ದಾಗಿದೆ. ಎರಡೂ ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಗುಜರಾತ್​ನ ಕಾರಿನಲ್ಲಿದ್ದ ಮೂವರು ಹಾಗೂ ಕೇರಳದ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗುಜರಾತ್ ಮೂಲದ ದಿನೇಶ್ (38), ಲತೀಶ್​ (37), ಸುರೇಶ್ (39) ಮತ್ತು ಕೇರಳ ಮೂಲದ ಸಾಹಲ್ (37) ವರ್ಷ ಮೃತಪಟ್ಟವರು.

    ಈ ಅಪಘಾತದಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಗಳುಗಳನ್ನು ರಾಣೆಬೆನ್ನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ್, ಎಎಸ್​​ಪಿ ವಿಜಯಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

    ಬಾಲಿವುಡ್​ ಸ್ಟಾರ್​ಗಳಿಗೆ ಸವಾಲೆಸೆದ ರಾಮ್​ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts