ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: 2 ಸಲ ಪಲ್ಟಿಯಾದ ಕಾರು; ಐವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

ಮಂಡ್ಯ: ಮೈಸೂರು-ಬೆಂಗಳೂರು ದಶಪಥದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಇಂದು ಮತ್ತೊಂದು ಭಾರಿ ಅಪಘಾತ ಉಂಟಾಗಿದೆ. ಅಪಘಾತದ ತೀವ್ರತೆಗೆ ಕಾರು ಎರಡು ಸಲ ಪಲ್ಟಿಯಾಗಿದೆ. ಮಾತ್ರವಲ್ಲ ಐವರಿಗೆ ಗಾಯಗಳಾಗಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಮಂಡ್ಯ ಬಳಿಯ ಚಿಕ್ಕಮಂಡ್ಯ ಸಮೀಪ ಈ ಅಪಘಾತ ಸಂಭವಿಸಿದೆ. ಟಯರ್​ ಬರ್ಸ್ಟ್​ ಆಗಿ ಕಾರು ಅಪಘಾತಕ್ಕೀಡಾಗಿದ್ದು, ಎರಡು ಸಲ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂಬುದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ … Continue reading ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: 2 ಸಲ ಪಲ್ಟಿಯಾದ ಕಾರು; ಐವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ