More

    ಕಲಬುರಗಿಯಲ್ಲಿ ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ, ಪತ್ನಿ ದುರ್ಮರಣ

    ಕಲಬುರಗಿ: ಜೇವರ್ಗಿ ತಾಲೂಕಿನ ಎಸ್​ಎನ್ ಹಿಪ್ಪರಗಿ ಬಳಿ ಇಂದು(ಬುಧವಾರ) ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ ಮತ್ತು ಇವರ ಪತ್ನಿ ದುರ್ಮರಣಕ್ಕೀಡಾಗಿದ್ದಾರೆ.

    ರವಿ ಉಕ್ಕುಂದ ಅವರು ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.

    ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ರಸ್ತೆ ಕ್ರಾಸ್​ ಮಾಡುವಾಗ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ದಂಪತಿ ದುರಂತ ಅಂತ್ಯ ಕಂಡಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನಿಸಿದ್ದಾರೆ.

    ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಚೀಲದಲ್ಲಿ ಪತ್ನಿಯ ಶವ ತುಂಬಿಕೊಂಡು ಸೈಕಲ್​ನಲ್ಲಿ ಸಾಗಿಸುತ್ತಿದ್ದ ಪತಿ..! ಯಳಂದೂರಲ್ಲಿ ಹೃದಯವಿದ್ರಾವಕ ಘಟನೆ

    ಜೂಜಾಟಕ್ಕೆ ತನ್ನನ್ನೇ ಪಣಕ್ಕಿಟ್ಟು ಸೋತು ಪರ ಪುರುಷನ ಪಾಲಾದ 2 ಮಕ್ಕಳ ತಾಯಿ! ಗಂಡನ ಗೋಳು ನೋಡಲಾಗ್ತಿಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts