More

    ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ ಜತೆಗಿದ್ದ 3 ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಸಾವು!

    ಹಾಸನ: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ತಾಯಿ ಜತೆಗಿದ್ದ ಮೂರು ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನದ ಭೂವನಹಳ್ಳಿಯ ಸಮೀಪ ಈ ಅಪಘಾತ ಸಂಭವಿಸಿದೆ.

    ಹಾಸನದ ಗವೇನಹಳ್ಳಿಯ ಶಿವಾನಂದ್-ಜ್ಯೋತಿ ದಂಪತಿಯ ಅವಳಿ ಮಕ್ಕಳು ಪ್ರಣತಿ (3), ಪ್ರಣವ್ (3) ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ದಂಪತಿಗೂ ಗಂಭೀರ ಗಾಯಗಳಾಗಿದ್ದು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ.

    ಇದನ್ನೂ ಓದಿ: ಭಾರತದಲ್ಲೇ ಉತ್ಪಾದನೆ ಆಗಲಿದೆ ಮತ್ತೊಂದು ಲಸಿಕೆ; ವಿಶ್ವ ಆರೋಗ್ಯ ಸಂಸ್ಥೆ ಪ್ರಮಾಣಿತ 9 ಲಸಿಕೆಗಳ ಪೈಕಿ 3 ಭಾರತದಲ್ಲೇ ತಯಾರಿ

    ದಂಪತಿ ಸ್ಕೂಟರ್​ನಲ್ಲಿ ಹೋಗುತ್ತಿದ್ದಾಗ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಚಾಲಕ ಪಾನಮತ್ತನಾಗಿ ವಾಹನ ಚಲಾಯಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಲಾರಿ ಒಟ್ಟು ನಾಲ್ಕು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ.

    ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಅಸ್ವಸ್ಥ: ಚಿಕಿತ್ಸೆ ಫಲಿಸದೆ ಬಾಲಕ ಸಾವು, ಮೂವರ ಸ್ಥಿತಿ ಗಂಭೀರ; ನಾನಾ ಅನುಮಾನ!

    ಈ ದಂಪತಿಗೆ ಡಿಕ್ಕಿ ಹೊಡೆದ ಮೇಲೂ ಲಾರಿಗೆ ಸಿಕ್ಕ ಬೈಕ್​ ಅದರ ಜತೆಗೆ ಎಳೆದೊಯ್ಯಲ್ಪಟ್ಟಿದ್ದು, ಟಯರ್​ ಅಡಿಗೆ ಸಿಕ್ಕ ಮಕ್ಕಳ ದೇಹಗಳೂ ಸುಮಾರು ಮೂರು ಕಿಲೋಮೀಟರ್ ದೂರ ಎಳೆದೊಯ್ಯಲ್ಪಟ್ಟಿವೆ. ಸಾರ್ವಜನಿಕರು ಲಾರಿಯನ್ನು ತಡೆದು ಚಾಲಕನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ ಜತೆಗಿದ್ದ 3 ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಸಾವು!

    ಫ್ಲೈಟಲ್ಲಿ ಬಂದು ಕಳವು ಮಾಡಿ ಫ್ಲೈಟಲ್ಲೇ ಮರಳಿದ; 5 ವರ್ಷಗಳ ಹಿಂದೆ ಕದ್ದು ಸಿಕ್ಕಿಬಿದ್ದಿದ್ದ ಆ ದ್ವೇಷವನ್ನು ಮತ್ತೆ ಕದ್ದೇ ತೀರಿಸಿಕೊಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts