ಬೆಂಗಳೂರು: ರಾಜಧಾನಿಯ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಪವನ್ ಕುಮಾರ್ ಜೈನ್ ಎಂದು ತಿಳಿದುಬಂದಿದೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಅದರ ಬಂಪರ್ ಕಿತ್ತು ರಸ್ತೆಯ ಬದಿಗೆ ಹೋಗಿ ಬಿದ್ದಿದೆ. ಈ ಕಾರು ದಾಸರಹಳ್ಳಿಯಿಂದ ಕೃಷ್ಣಗಿರಿ ಕಡೆಗೆ ಸಾಗುತ್ತಿತ್ತು.
ಪವನ್ ಕುಮಾರ್ ಜೈನ್ ಎಂಬವರು ಕುಟುಂಬಸ್ಥರೊಂದಿಗೆ ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿಯಾದ ವೇಗದಲ್ಲಿ ಇದ್ದಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
‘ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎನ್ನಬೇಡಿ..’; ಮಾಧ್ಯಮದವರಿಗೆ ಬಾಲಚಂದ್ರ ಜಾರಕಿಹೊಳಿ ಮನವಿ