More

    ಹೊಸಪೇಟೆಯಲ್ಲಿ ಗಾಜಿನಮನೆ: ಸಚಿವ ಆನಂದ್ ಸಿಂಗ್ ಮಾಹಿತಿ

    ಹೊಸಪೇಟೆ: ಪ್ರವಾಸೋದ್ಯಮ ಉತ್ತೇಜನಕ್ಕಾಗಿ ನಗರದಲ್ಲಿ ಗಾಜಿನ ಮನೆ ಪ್ರವಾಸಿ ತಾಣ ನಿರ್ಮಿಸಲು ಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಉದ್ಯಾನ ನಿರ್ಮಾಣಕ್ಕೂ ರೂಪುರೇಷೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಸೂಚಿಸಿದ್ದಾರೆ.

    ನಗರದಲ್ಲಿ ಗುರುವಾರ ಜಿಲ್ಲಾ ಖನಿಜ ನಿಧಿ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಅಗತ್ಯ ನಿವೇಶನ, ಕಟ್ಟಡ ನಿರ್ಮಾಣಕ್ಕೆ ಪೂರಕ ಸಲಹೆಗಳನ್ನು ನೀಡಿದರು. ನಗರದ ಸರ್ವತೋಮುಖ ಅಭಿವೃದ್ಧಿಗೆ ಸಮರ್ಪಕವಾಗಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿದರೆ ಅನುದಾನ ಒದಗಿಸಲು ಕ್ರಮವಹಿಸಲಾಗುವುದು ಎಂದರು. ವಿವಿಧ ಇಲಾಖೆಗಳ ಪ್ರಗತಿ ವರದಿ ಆಲಿಸಿದರು. ನಗರಸಭೆ ಪೌರಾಯುಕ್ತೆ ಜಯಲಕ್ಷ್ಮೀ, ಬಿಇಒ ಪಿ.ಸುನಂದಾ, ಸಿಡಿಪಿಒ ಅಮರೇಶ್, ಟಿಎಚ್‌ಒ ಭಾಸ್ಕರ್, ಲೋಕೋಪಯೋಗಿ ಇಲಾಖೆ ಎಇಇ ಕಿಶೋರ್ ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts