ಹೊಸಪೇಟೆ: ನಗರದ ಹೃದಯ ಭಾಗದಲ್ಲಿರುವ ಉಡುಪಿ ಶ್ರೀಕೃಷ್ಣ ಹೋಟೆಲ್ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿತು. ಹೊಟೇಲ್ನ ಅಡುಗೆ ಮನೆಯ ಬಾಯ್ಲರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇತರೆಡೆ ಹರಡುವುದರೊಳಗೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿತು. 10ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್ಗಳನ್ನು ಬೇರೆಕಡೆ ಶಿಫ್ಟ್ ಮಾಡಿತು.