More

    25ಕ್ಕೆ ಶ್ರೀನಿವಾಸ ಕಲ್ಯಾಣೋತ್ಸವ


    ಹೊಸಪೇಟೆ: ಸಪ್ತಪದಿ ಫೌಂಡೇಷನ್ ಟ್ರಸ್ಟ್ ಮತ್ತು ಬ್ರಾಹ್ಮಣ ಸಂಘಟನೆಗಳ ಒಕ್ಕೂಟದಿಂದ ಲೋಕ ಕಲ್ಯಾಣಾರ್ಥವಾಗಿ ಫೆ.25 ಮತ್ತು 26ರಂದು ನಗರದ ಶ್ರೀ ಉತ್ತರಾಧಿಮಠ ಸಭಾಂಗಣದಲ್ಲಿ ಶ್ರೀನಿವಾಸ ಕಲ್ಯಾಣ ಮತ್ತು ವಧು- ವರ ಅನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ ಎಂದು ಬ್ರಾಹ್ಮಣ ಸಂಘದ ಅಧ್ಯಕ್ಷ ದಿವಾಕರ್ ಹೇಳಿದರು.
    ಬೆಳಗ್ಗೆ 8ರಿಂದ ಮಧ್ಯಾಹ್ನ 2 ಗಂಟೆವರೆಗೆ ವಧು-ವರ ನೋಂದಣಿ ನಡೆಯಲಿದೆ. ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಉದ್ಘಾಟನೆ ಮತ್ತು ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಆಯೋಜಿಸಲಾಗಿದೆ. ಫೆ.26ರ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ‘ವಧು- ವರ ಅನ್ವೇಷಣಾ ಸಮಾವೇಶ’ ಜರುಗಲಿದೆ. ಆಸಕ್ತ ವಧು-ವರರು ಫೆ.24ರೊಳಗೆ ಶ್ರೀನಿವಾಸ್ ಭಾರದ್ವಾಜ್ (9449425536/ 8217876335) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಅರ್ಚಕ ತಿರುಮಲೇಶ ಚಾರ್ಯ, ಹೊಸಪೇಟೆ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ದಿವಾಕರ್, ಜಿಲ್ಲಾಧ್ಯಕ್ಷ ಪದ್ಮ ಕಾಂತ್, ಬಾಲಕೃಷ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts