More

    ಹೊಸಪೇಟೆಯಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ

    ಹೊಸಪೇಟೆ: ಸಿರಿಧಾನ್ಯ ಬಳಕೆಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

    ಇದನ್ನು ಓದಿ: ಮೈ ನಡುಗಿಸುವ ಚಳಿ, ದಟ್ಟವಾದ ಮಂಜು: ಕೆಲವು ರಾಜ್ಯಗಳಲ್ಲಿ ಜ.6 ರವರೆಗೆ ಶಾಲೆಗಳು ಕ್ಲೋಸ್‌, ರೈಲು, ವಿಮಾನ ಮಾರ್ಗದಲ್ಲಿ ಬದಲಾವಣೆ

    ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳದ ನಿಮಿತ್ತ ಕೃಷಿ ಇಲಾಖೆಯಿಂದ ನಗರದಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಿರಿಧಾನ್ಯಗಳ ಉತ್ತಮ ಪೋಷಕಾಂಶಗಳನ್ನು ಹೊಂದಿರುವುದರ ಜತೆಗೆ ಆರೋಗ್ಯ ಸಮಸ್ಯೆಗಳನ್ನು ನಿವಾರಿ ಸುವ ಶಕ್ತಿಯನ್ನು ಸಹ ಹೊಂದಿವೆ. ಹೆಚ್ಚು ಆಯಸ್ಸು, ಕಾಯಿಲೆಗಳಿಂದ ದೂರ ಇರಬೇಕು ಎಂದರೆ ಸಿರಿಧಾನ್ಯಗಳ ಬಳಕೆ ಮಾಡಬೇಕು ಎಂದರು.

    ಸಿರಿಧಾನ್ಯಗಳ ಕೃಷಿಯು ಕೇವಲ ಸಾಂಪ್ರದಾಯಿಕ ಕೃಷಿಯಲ್ಲ. ಇದೊಂದು ವಿಶೇಷ ಹಾಗೂ ವಿಶಿಷ್ಟ ಕೃಷಿಯಾಗಿದೆ. ಕಡಿಮೆ ಮಳೆ ಇದ್ದರೂ ಸಹ ಈ ಬೆಳೆಗಳನ್ನು ಬೆಳೆಯಬಹುದು. ಇವುಗಳ ಬೆಳವಣಿಗೆಗೆ ರಾಸಾಯನಿಕ ಗೊಬ್ಬರಗಳ ಬಳಕೆ ಅವಶ್ಯಕತೆ ತೀರಾ ಕಡಿಮೆ ಇದೆ ಎಂದರು.

    ಈ ಸಿರಿಧಾನ್ಯಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಹಾಗೂ ಇವುಗಳಿಂದ ತಯಾರಿಸಬಹುದಾದ ಖಾದ್ಯಗಳು, ಅವುಗಳಲ್ಲಿರುವ ಪೌಷ್ಠಿಕತೆಯ ಬಗ್ಗೆ ಮನವರಿಕೆ ಮಾಡುವ ಕೆಲಸ ಇಲಾಖಾ ವತಿಯಿಂದ ಆಗಬೇಕಾಗಿದೆ ಎಂದರು.

    ಎಪಿಎಂಸಿ ಆರಂಭವಾದ ಸಿರಿಧಾನ್ಯ ನಡಿಗೆ ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ದೊಡ್ಡ ಮಸೀದಿ, ಗಾಂಧಿಚೌಕು, ಪುಣ್ಯಪೂರ್ತಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಡಾ.ಪುನೀತ್ ರಾಜಕುಮಾರ್ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕಾಲೇಜು ರಸ್ತೆ ಮಾರ್ಗವಾಗಿ ಒಳಕ್ರೀಡಾಂಗಣಕ್ಕೆ ತಲುಪಿತು.

    ಜಿ.ಪಂ. ಸಿಇಒ ಸದಾಶಿವ ಪ್ರಭು, ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ತಾಪಂ ಇಒ ಉಮೇಶ್, ಡಿಡಿ ನಯಿಂ‌ ಪಾಷಾ, ಸಹಾಯಕ ನಿರ್ದೇಶಕ ವಾಮದೇವ ಕೊಳ್ಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts