ಹೊಸಪೇಟೆ( ಬಳ್ಳಾರಿ): ಮಕ್ಕಳಿಗೆ ವಿಷವುಣಿಸಿ ದಂಪತಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ನಂಜುಂಡೇಶ್ಚರ(32), ಪತ್ನಿ ಪಾರ್ವತಿ ಹಾಗೂ ಮಕ್ಕಳಾದ ಗೌತಮಿ (3), ಸ್ವರೂಪ್ (2) ಮೃತಪಟ್ಟಿದ್ದಾರೆ. ನಂಜುಂಡೇಶ್ವರ ಜಿಂದಾಲ್ ಕಂಪನಿಯ ನೌಕರರರಾಗಿದ್ದರು. ಡೆತ್ನೋಟ್ ಬರೆದಿಟ್ಟು, ಮಕ್ಕಳಿಗೆ ವಿಷವುಣಿಸಿ, ದಂಪತಿಗಳಿಬ್ಬರು ನೇಣು ಬೀಗಿದುಕೊಂಡು ಮೃತಪಟ್ಟಿದ್ದಾರೆ.
ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಡೆತ್ನೋಟ್ನಲ್ಲಿ ನಮ್ಮ ಸಾವಿಗೆ ನಾವೇ ಕಾರಣರಾಗಿದ್ದು, ಯಾರು ಜವಬ್ದಾರರಲ್ಲ ಎಂದು ಬರೆದಿದ್ದಾರೆ. ಅಲ್ಲದೆ, ನಮ್ಮಿಂದ ಯಾರಿಗಾದರೂ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಘಟನಾ ಸ್ಥಳಕ್ಕೆ ಗಾದಿಗನೂರು ಠಾಣಾ ಪೊಲೀಸರು ಭೇಟಿ ನೀಡಿವ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)
ಮೂರು ಮಕ್ಕಳ ತಂದೆಯ ಪ್ರೀತಿಗೆ ಬಿದ್ದು ಮದುವೆಯಾಗಲಾರದೇ ತೊಳಲಾಡುತ್ತಿದ್ದೇನೆ- ಪ್ಲೀಸ್ ಪರಿಹಾರ ಹೇಳಿ
ಸರ್ಕಾರಿ ನೌಕರನೆಂದು ಮದ್ವೆಯಾದವಳಿಗೆ ನಿತ್ಯ ನರಕ ದರ್ಶನ: ಗಂಡನ ಮೊಬೈಲ್ ನೋಡಿ ಪತ್ನಿಗೆ ಶಾಕ್!