More

    ಹೊಸಪೇಟೆಯಲ್ಲಿ ಕಾರ್ಯಕರ್ತರ ರ‌್ಯಾಲಿ

    ಹೊಸಪೇಟೆ: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತಪರ ಯೋಜನೆಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ನಗರದ ಪುನೀತ್ ರಾಜಕುಮಾರ್ ಸರ್ಕಲ್‌ನಿಂದ ತಹಸಿಲ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ವಿಶ್ವಜೀತ್ ಮೆಹತಾಗೆ ಮನವಿ ಸಲ್ಲಿಸಲಾಯಿತು.

    ಹುಡಾ ಮಾಜಿ ಅಧ್ಯಕ್ಷ ಅಶೋಕ ಜೀರೆ ಮಾತನಾಡಿ, ಕಿಸಾನ್ ಸಮ್ಮಾನ್ ಯೋಜನೆ ಕೇಂದ್ರ ಸರ್ಕಾರದೊಂದಿಗೆ ಬಿಜೆಪಿ ರಾಜ್ಯ ಸರ್ಕಾರ ವಾರ್ಷಿಕ ನಾಲ್ಕು ಸಾವಿರ ರೂ. ನೀಡುತ್ತಿತ್ತು.

    ಜಿಲ್ಲೆಗೊಂದು ಗೋಶಾಲೆ, ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ತಡೆಹಿಡಿದಿರುವುದು ಸರಿಯಲ್ಲ. ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಾರಿಯಲ್ಲಿದ್ದ ಎಲ್ಲ ಯೋಜನೆಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.

    ಮಳೆ ಅಭಾವ ಉಂಟಾಗಿರುವುದರಿಂದ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಪರಿಹಾರ ಕಾರ್ಯ ಕೈಗೊಳ್ಳಬೇಕು. ಲೋಡ್ ಶೆಡ್ಡಿಂಗ್ ರದ್ದುಪಡಿಸಿ ನಿರಂತರ ಹಗಲು ಹೊತ್ತಿನಲ್ಲಿ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts