More

    ಅಪರಾಧಿಗಳ ಬಿಡುಗಡೆ ಆದೇಶ ಹಿಂಪಡೆಯಿರಿ

    ಹೊಸಪೇಟೆ: ಗುಜರಾತ್‌ನ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಿದ ಆದೇಶವನ್ನು ಸರ್ಕಾರ ಹಿಂಪಡೆಯಬೇಕು ಎಂದು ರಾಜ್ಯ ಮಹಿಳಾ ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.

    ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಮಹಿಳಾ ಸಮುದಾಯಕ್ಕೆ ಕರಾಳ ದಿನವಾಗಿ ಮಾರ್ಪಟ್ಟಿದೆ. ಗುಜರಾತ್‌ನ ಗರ್ಭಿಣಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ಕುಟುಂಬಸ್ಥರನ್ನು ಕಗ್ಗೊಲೆ ಮಾಡಿದ ದುರುಳರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಪೂರ್ಣಗೊಳ್ಳು ವ ಮುನ್ನವೇ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿರುವುದು ಅಕ್ಷಮ್ಯ ಎಂದು ಟೀಕಿಸಿದರು.

    ಜೈಲಿನಿಂದ ಹೊರಬಂದ ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನಿಸಿದ್ದಾರೆ. ಈ ಮೂಲಕ ಗುಂಡಾ ಸಂಸ್ಕೃತಿಯ ಪ್ರತಿಪಾದಕರಿಗೆ ರಾಜಾತೀಥ್ಯ ನೀಡಿರುವುದು ಸಮಾಜ ತಲೆತಗ್ಗಿಸುವಂತಾಗಿದೆ. ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸುರಕ್ಷತೆ ಮತ್ತು ಸಬಲೀಕರಣದ ಭರವಸೆಗಳನ್ನು ಅಣುಕಿಸುವಂತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts