ನಿರ್ಲಕ್ಷಿಸದೇ ಆರೋಗ್ಯದ ಕಾಳಜಿ ವಹಿಸಿ

blank

ಹೊಸಪೇಟೆ: ಅಂಜುಮನ್ ಖಿದ್ಮತೆ ಈ ಇಸ್ಲಾಂ ಸಂಘಟನೆ ನೇತೃತ್ವದಲ್ಲಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನಗರದ ಅಂಜುಮನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಹುಡಾ ಅಧ್ಯಕ್ಷ ಎಚ್.ಎನ್.ಮಹಮ್ಮದ್ ಇಮಾಮ್ ನಿಯಾಜಿ ಮಾತನಾಡಿ, ಅತ್ಯಾಧುನಿಕ ಯುಗದಲ್ಲಿ ಆರೋಗ್ಯದ ಮಹತ್ವವನ್ನು ಅರಿಯದೆ ನಿರ್ಲಕ್ಷ ಮಾಡುತ್ತಿದ್ದಾರೆ. ಪ್ರತಿಯೊಬ್ಬರು ಆರೋಗ್ಯದ ಕಾಳಜಿ ವಹಿಸಬೇಕು. ಆರೋಗ್ಯವೇ ಮಹಾಭಾಗ್ಯ ಎನ್ನುವ ನಾಣ್ಣುಡಿಯಂತೆ ಈ ಭಾಗದ ಜನರು ಯಾವುದೇ ತಾರತಮ್ಯ ಭೇದ ಭಾವನೆ ಇಲ್ಲದೆ ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ ಮಾತನಾಡಿ, ಉಚಿತ ತಪಾಸಣಾ ಶಿಬಿರಗಳಿಂದ ಆರ್ಥಿಕವಾಗಿ ಹಿಂದುಳಿದವರಿಗೆ ಉಪಯೋಗ ಆಗುತ್ತದೆ. ಯಾವುದೇ ಜಾತಿ ಮತ ಪಂಥ ವಿಲ್ಲದೆ ಎಲ್ಲರೂ ಸದುಪಯೋಗ ಪಡೆದು ಕೊಳ್ಳಬಹುದು ಹಾಗೂ ಪರಸ್ಪರ ಸಹಕಾರ, ಹೊಂದಾಣಿಕೆ, ಪ್ರೀತಿ, ವಿಶ್ವಾಸಗಳಿಸಲು ಸಾಧ್ಯವಾಗುತ್ತದೆ ಎಂದರು.

ನಗರ ಸಭೆಯ ಸದಸ್ಯ ತಾರಳ್ಳಿ ಜಂಬುನಾಥ, ಅಂಜುಮನ್ ಕಮಿಟಿ ಉಪಾಧ್ಯಕ್ಷ ಡಾ.ಎಂ.ಎA.ಫೈರೋಜ್ ಖಾನ್, ಕಾರ್ಯದರ್ಶಿ ಅಬೂಬಕ್ಕರ್ ಅಶ್ರಫಿ, ಪ್ರಮುಖರಾದ ಅನ್ಸರ್ ಭಾಷ, ಜಂಟಿಕಾರ್ಯದರ್ಶಿ ಡಾ.ದುರ್ವೆಶ್ ಮೈನುದ್ದೀನ್, ಸದ್ದಮ್ ಹುಸೇನ್, ಮೊಹಮ್ಮದ್ ಮೋಸಿನ್, ಗುಲಾಮ್ ರಸೂಲ್ ಇತರರಿದ್ದರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…