ಲೋಕಾಯುಕ್ತ ಬಲೆಗೆ ಸಾರಿಗೆ ಸಂಸ್ಥೆ ಅಧಿಕಾರಿ

blank

ಹೊಸಪೇಟೆ: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಜಯನಗರ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ವಿ.ಎಸ್. ಹಾಗೂ ತನ್ನ ಡ್ರೈವರ್ ಜತೆಗೆ ಬುಧವಾರ ಸಂಜೆ 20 ಸಾವಿರ ರೂ. ನಗದು ಲಂಚ ಸ್ವೀಕಾರ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

blank

ಹರಪನಹಳ್ಳಿಯ ಚಾಲಕ ಕಂ ನಿರ್ವಾಹಕ ಮಹಾಬಲೇಶ್ವರ ಭಾಗವತ್ ಎಂಬವರ ವಿರುದ್ಧದ ಪ್ರಕರಣಯೊಂದರ ಇಲಾಖಾ ವಿಚಾರಣೆಯನ್ನು ಸ್ಥಗಿತಗೊಳಿಸುವ ಕುರಿತು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ. ಈ ಹಿಂದೆ ಜಗದೀಶ್ ವಿ.ಎಸ್. ಅವರ ಕಾರು ಚಾಲಕ ಮಲ್ಲಿಕಾರ್ಜುನಗೆ ಐದು ಸಾವಿರ ರೂ. ನಗದು ನೀಡಲಾಗಿತ್ತು. ಮತ್ತೆ 20 ಸಾವಿರ ರೂ. ಲಂಚ ನೀಡಲು ಬಂದಾಗ ಹೊಸಪೇಟೆ ಲೋಕಾಯುಕ್ತ ತಂಡ ಬಲೆಗೆ ಬೀಳಿಸಿದೆ. ಜಗದೀಶ್ ವಿ.ಎಸ್. ಹಾಗೂ ಮಲ್ಲಿಕಾರ್ಜುನ ಇಬ್ಬರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹೊಸಪೇಟೆ ಲೋಕಾಯುಕ್ತ ಡಿವೈಎಸ್ಪಿ ಶೀಲವಂತ ಎಸ್., ಇನ್ಸ್ಪೆಕ್ಟರ್‌ಗಳಾದ ರಾಜೇಶ್ ಎಸ್.ಲಮಾಣಿ, ಸುರೇಶ್ ಬಾಬು ಹಾಗೂ ಸಿಬ್ಬಂದಿ ದಾಳಿ ನಡೆಸಿ ಕ್ರಮಕೈಗೊಂಡಿದ್ದಾರೆ.

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank