ತಾಯಿ ಈರಿಬಾಯಿ ಜತೆ ಪಿಎಚ್.ಡಿ ಪಡೆದ ಕುಮಾರ್ ರಾಠೋಡ್.
ಹೊಸಪೇಟೆ: ಜಿಲ್ಲೆಯ ಹೂವಿನಹಡಗಲಿ ತಾಲೂಕು ಲಿಂಗನಾಯಕನಹಳ್ಳಿ ತಾಂಡಾದ ಯುವಕ ಕುಮಾರ ರಾಠೋಡ್ ಅವರು ಮುಂಬೈನ ಕೇಂದ್ರೀಯ ಮೀನುಗಾರಿಕೆ ಶಿಕ್ಷಣ ಸಂಸ್ಥೆಯಲ್ಲಿ ಪಿಎಚ್.ಡಿ ಪಡೆದಿದ್ದಾರೆ. ಸುಸ್ಥಿರ ಹ್ಯಾಲೋಫೈಟ್ ಆಧಾರಿತ ಸಮಗ್ರ ಮಲ್ಟಿ-ಟ್ರೋಫಿಕ್ ಉಪ್ಪುನೀರಿನ ಜಲಚರ ಸಾಕಣೆ ಮಾದರಿಗಳ ಮೌಲ್ಯಮಾಪನ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ದೊರೆತಿದೆ. ಮುಂಬೈನ ಕೇಂದ್ರೀಯ ಮೀನುಗಾರಿಕೆ ಶಿಕ್ಷಣ ಸಂಸ್ಥೆಯ ಕಾಕಿನಾಡ ಸಂಶೋಧನಾ ಕೇಂದ್ರದ ಅಧಿಕಾರಿ ಮತ್ತು ಹಿರಿಯ ವಿಜ್ಞಾನಿ ಡಾ.ಮುರಳಿಧರ ಪಿ.ಅಂಡೆ ಮಾರ್ಗದರ್ಶಕರಾಗಿದ್ದರು.