ಲಖನೌ : ಉತ್ತರ ಪ್ರದೇಶದಲ್ಲಿ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯು ಕರೊನಾ ರೋಗಿಗಳನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸದಂತೆ ಎಚ್ಚರಿಕೆ ವಹಿಸಲು ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಡ್ ಲಭ್ಯವಿದ್ದಲ್ಲಿ ಯಾವ ಆಸ್ಪತ್ರೆಯೂ ಅಡ್ಮಿಷನ್ ನೀಡದೆ ರೋಗಿಗಳನ್ನು ವಾಪಸ್ ಕಳುಹಿಸುವ ಹಾಗಿಲ್ಲ ಎಂದು ಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿಲ್ಲದಿದ್ದಲ್ಲಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಒಂದು ಪಕ್ಷ ಹೀಗೆ ಖಾಸಗಿ ಆಸ್ಪತ್ರೆಗೆ ಕಳುಹಿಸಲ್ಪಟ್ಟ ರೋಗಿಗೆ ಅಲ್ಲಿನ ವೆಚ್ಚವನ್ನು ಭರಿಸಲು ಸಾಧ್ಯವಿಲ್ಲದಿದ್ದಲ್ಲಿ, ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಅನುಮೋದಿಸಲ್ಪಟ್ಟ ದರಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹಣ ನೀಡಲಾಗುವುದು ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ. (ಏಜೆನ್ಸೀಸ್)