More

    ಮಕ್ಕಳಿಗೆ ಅನುಕೂಲಕ್ಕಾಗಿ ಹಾಸ್ಟೆಲ್ ಪ್ರಾರಂಭ: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಸಾದ್‌ಬಾಬು ಹೇಳಿಕೆ

    ಮಂಡ್ಯ: ನಗರದಲ್ಲಿ ಬೆಳಕು ಸಾಮಾಜಿಕ ಸೇವಾ ಸಂಸ್ಥೆಯಿಂದ ಬೆಳಕು ಸಂಸ್ಕಾರ ವಸತಿ ನಿಲಯದ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿತ್ತು.
    ಹಾಸ್ಟೆಲ್ ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಪ್ರಸಾದ್‌ಬಾಬು, ಬೆಳಕು ಸಾಮಾಜಿಕ ಸೇವಾ ಸಂಸ್ಥೆಯು ಉತ್ತಮ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಅದರಂತೆ ಬಡಮಕ್ಕಳ ಶಿಕ್ಷಣ ಮತ್ತು ಕ್ರೀಡೆ ಸೇರಿದಂತೆ ಉಳಿದುಕೊಳ್ಳಲು ಸಹಕಾರ ಮಾಡುತ್ತಿರುವುದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
    ಎಲ್ಲರೂ ಈ ಸಂಸ್ಥೆಗೆ ಕೈಜೋಡಿಸಬೇಕು. ಇವರ ಕನನ್ನ ನನಸು ಮಾಡಲು ಎಲ್ಲರೂ ಸಹಕರಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಯಲ್ಲಿಯೇ ಕಬಡ್ಡಿ ಸೇರಿದಂತೆ ಇತರೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೇಹದ ಆರೋಗ್ಯ ಹಿಡಿತದಲ್ಲಿರುವ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
    ಡಿಜೆಸಿಎಂ ಸೇವಾ ಟ್ರಸ್ಟ್ ಅಧ್ಯಕ್ಷ ನಾರಾಯಣ ತಿರುಮಲಾಪುರ, ಸಮಾಜಸೇವಕ ಆದರ್ಶ ಹೊನ್ನಪ್ಪ, ನಗರಸಭೆ ಸದಸ್ಯ ನಾಗೇಶ್, ಮುಖಂಡ ವಸಂತಕುಮಾರ್, ಉಪನ್ಯಾಸಕ ಜನಾರ್ದನ್ ಕೊಂಡ್ಲಿ, ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್, ಗಾಣದ ಮಾಲೀಕರ ಸಂಘದ ಅಧ್ಯಕ್ಷ ಸೋಮಶಂಕರೇಗೌಡ, ಜಗದೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts