ಲಿಂಗಸುಗೂರು: ತಾಲೂಕಿನ ಎಲ್ಲ ವಸತಿ ನಿಲಯಗಳಲ್ಲಿ ಮೂಲಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಆಗ್ರಹಿಸಿ ಎಸಿ ಅವಿನಾಶ ಶಿಂಧೆಗೆ ಎಸ್ಎಫ್ಐ ಕಾರ್ಯಕರ್ತರು ಮಂಗಳವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಗ್ರಾಪಂ ಮಟ್ಟದಲ್ಲೇ ಸಮಸ್ಯೆಗಳಿಗೆ ಪರಿಹಾರ
ಕೆಲವು ವರ್ಷಗಳಿಂದ ವಸತಿ ನಿಲಯಗಳಿಗೆ ಸರಿಯಾದ ಸೌಕರ್ಯ ನೀಡದೆ, ಕಳಪೆ ಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕೆಲ ವಾರ್ಡನ್ಗಳು ವಿದ್ಯಾರ್ಥಿಗಳಿಗೆ ತಲುಪಿಸುತ್ತಿಲ್ಲ,
ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸದ ವಾರ್ಡನ್ಗಳು
ಈ ಬಗ್ಗೆ ಪ್ರಶ್ನಿಸುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು. ವಸತಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಕುಂದು-ಕೊರತೆಗಳನ್ನು ಆಲಿಸಿ ಮುಂದಿನ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.