ಬೆಂಗಳೂರು: ಸೈರನ್ ಹಾಕಿಕೊಂಡು ಸಕಾಲಕ್ಕೆ ವಿದ್ಯಾರ್ಥಿಯನ್ನು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ಮೂಲಕ ನಗರದ ಪೊಲೀಸ್ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ.
ಕೊತ್ತನೂರಿನ ಹೊಯ್ಸಳ ಸಿಬ್ಬಂದಿ ಗೌರಿಶ್ ಹಾಗೂ ಸೋಮಶೇಖರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವಿದ್ಯಾರ್ಥಿಯೊಬ್ಬ ಸಿಇಟಿ ಪರೀಕ್ಷೆ ಬರೆಯಲು ಹೋಗಬೇಕಿತ್ತು. ಆದರೆ, ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇದ್ದಿದ್ದರಿಂದ ನಗರದಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಇದರಿಂದ ವಿದ್ಯಾರ್ಥಿ ಮನನೊಂದಿದ್ದ.
ಇದನ್ನೂ ಓದಿ: RRR ಚಿತ್ರದ ಖಳನಟ ರೇ ಸ್ಟೀವನ್ಸನ್ ಇನ್ನಿಲ್ಲ: ಮೇ 25ರಂದು 59ನೇ ಹುಟ್ಟುಹಬ್ಬಕ್ಕೂ ಮುನ್ನವೇ ಕಣ್ಮರೆ
15 ನಿಮಿಷದಲ್ಲಿ ಪರೀಕ್ಷಾ ಕೇಂದ್ರಕ್ಕೆ
ವಿದ್ಯಾರ್ಥಿಯನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿದಾಗ ಸಿಇಟಿ ಪರೀಕ್ಷೆಗೆ ಹೋಗುತ್ತಿರುವುದಾಗಿ ಮತ್ತು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿರುವುದಾಗಿ ಅಸಹಾಯಕತೆ ತೋಡಿಕೊಂಡಿದ್ದ. ಬಳಿಕ ಆತನಿಗೆ ಧೈರ್ಯ ತುಂಬಿ, ಹೊಯ್ಸಳ ವಾಹನದಲ್ಲಿ ಕೇವಲ 15 ನಿಮಿಷದಲ್ಲಿ ಕೋರಮಂಗಲದ ಜೆ.ಎನ್.ಸಿ ಕಾಲೇಜಿಗೆ ತಲುಪಿಸುವ ಮೂಲಕ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಹೊಯ್ಸಳ ಸಿಬ್ಬಂದಿ ನೆರವಾದರು.
ನಿಮ್ಮ ಸೇವೆಗೆ ಸದಾ ಸಿದ್ಧ
ಹೊಯ್ಸಳ ಸಿಬ್ಬಂದಿಗೆ ವಿದ್ಯಾರ್ಥಿ ಧನ್ಯವಾದ ತಿಳಿಸಿದ್ದಾನೆ. ನಾವು ನಿಮ್ಮ ಸೇವೆಗೆ ಸದಾ ಸಿದ್ಧವಾಗಿರುತ್ತೇವೆ ಎಂದು ಹೊಯ್ಸಳ ಸಿಬ್ಬಂದಿ ಸಹ ಸಾರ್ವಜನಿಕರಿಗೆ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದು, ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. (ದಿಗ್ವಿಜಯ ನ್ಯೂಸ್)
ಎಲೆಕ್ಟ್ರಿಕ್ ವಾಹನಗಳ ಸಬ್ಸಿಡಿ ಶೇ.15ಕ್ಕೆ ಇಳಿಕೆ; ಜೂನ್ನಿಂದ ಇವಿ ವಾಹನಗಳು ದುಬಾರಿ
ನೋಟು ಬದಲಾವಣೆ ಚಿಂತೆ ಬೇಡ; ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಭಯ | ಇಂದಿನಿಂದ ವಿನಿಮಯ
ಡಿಜಿಟಲ್ ಇಂಡಿಯಾದ ಅಭ್ಯುದಯ: ರಾಷ್ಟ್ರವನ್ನು ತಂತ್ರಜ್ಞಾನ ಹೇಗೆ ಪರಿವರ್ತಿಸುತ್ತಿದೆ?