More

    ಕುಮಾರೇಶ್ವರ ಆಸ್ಪತ್ರೆಯಲ್ಲಿ ಹೃದಯ ಜ್ಯೋತಿ ಯೋಜನೆ

    ಬಾಗಲಕೋಟೆ: ನಗರದ ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆಯನ್ನು ಕರ್ನಾಟಕ ಸರ್ಕಾರದ ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆಯ ಚಿಕಿತ್ಸಾ ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ.

    ಹೃದಯಾಘಾತದಂತಹ ಭೀಕರ ಕಾಯಿಲೆಗೆ ತಕ್ಷಣವೇ ಚಿಕಿತ್ಸೆ ನೀಡಲು ಸರ್ಕಾರ ಈ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈಗಾಗಲೇ 15 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯನ್ನು ಪುನೀತ್ ರಾಜಕುಮಾರ ಹೃದಯಜ್ಯೋತಿ ಯೋಜನೆಯ ಚಿಕಿತ್ಸಾ ಕೇಂದ್ರವೆಂದು ಪರಿಗಣಿಸಲಾಗಿದೆ.

    ಈ ಯೋಜನೆಯಲ್ಲಿ ಹೃದಯಾಘಾತಕ್ಕೊಳಗಾದ ರೋಗಿಗೆ ತಕ್ಷಣವೇ ತುರ್ತು ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಇರುತ್ತದೆ. ಬಾಗಲಕೋಟೆ, ಮುಧೋಳ, ಹುನಗುಂದ, ಕಲಬುರ್ಗಿ ಮತ್ತು ಕುಷ್ಠಗಿ ತಾಲೂಕುಗಳನ್ನು ಕುಮಾರೇಶ್ವರ ಆಸ್ಪತ್ರೆಯ ಚಿಕಿತ್ಸಾ ಕೇಂದ್ರದ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ.

    ಈ ಯೋಜನೆಯ ಮೊದಲ ಹಂತವಾಗಿ ಏ. 23 ರಿಂದ ಏ.25 ರ ವರೆಗೆ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯಲ್ಲಿ ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನರ್ಸಿಂಗ್ ಸಿಬ್ಬಂದಿ, ಅಂಬ್ಯುಲೆನ್ಸ್ ಚಾಲಕರು ಹಾಗೂ ಸಹಾಯಕ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ವ್ಯಕ್ತಿಯು ಹೃದಯಾಘಾತಕ್ಕೊಳಗಾದ ಸಂದರ್ಭ ಕೈಗೊಳ್ಳಬೇಕಾದ ತುರ್ತು ಚಿಕಿತ್ಸೆಯ ಬಗ್ಗೆ ಈ ತರಬೇತಿ ಶಿಬಿರದಲ್ಲಿ ಕುಮಾರೇಶ್ವರ ಆಸ್ಪತ್ರೆಯ ಪರಿಣಿತ ವೈದ್ಯರಿಂದ ಪ್ರಾತ್ಯಕ್ಷಿಕ ತರಬೇತಿ ನೀಡಲಾಗುವುದು. ಈ ತರಬೇತಿಯನ್ನು ಜೀವರಕ್ಷಾ ಟ್ರಸ್ಟ್‌ನ ಸಹಯೋಗದಲ್ಲಿ ಆಯೋಜಿಸಲಾಗಿದೆ.

    ಈ ನೂತನ ಆರೋಗ್ಯ ಯೋಜನೆಯ ಅನುಷ್ಠಾನಕ್ಕಾಗಿ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯನ್ನು ಚಿಕಿತ್ಸಾ ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದು ಹೆಮ್ಮೆಯ ಸಂಗತಿ. ಕುಮಾರೇಶ್ವರ ಆಸ್ಪತ್ರೆಯಲ್ಲಿ ಈಗಾಗಲೇ ಹೃದಯ ಸಂಬಂಧಿತ ಕಾಯಿಲೆಗಳಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪರಿಣಿತ ಹೃದಯರೋಗ ತಜ್ಞರು ಇಲ್ಲಿ ಕಾರ್ಯನಿರ್ವಹಿಸುತ್ತಿರುವರು. ಈ ಎಲ್ಲ ಸೌಲಭ್ಯಗಳನ್ನು ಪರಿಗಣಿಸಿ ಸರ್ಕಾರ ಬಾಗಲಕೋಟೆ ಜಿಲ್ಲೆಯಲ್ಲಿ ನಮ್ಮ ಆಸ್ಪತ್ರೆಯನ್ನು ಚಿಕಿತ್ಸಾ ಕೇಂದ್ರವಾಗಿ ಗುರುತಿಸಿದೆ. ಸಾರ್ವಜನಿಕರು ಈ ಸೌಲಭ್ಯ ಪಡೆಯಬೇಕು.
    ಡಾ. ವೀರಣ್ಣ ಸಿ. ಚರಂತಿಮಠ ಬಿವಿವಿ ಸಂಘದ ಕಾರ್ಯಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts