ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಂಜೀವ ಆಯ್ಕೆ

blank

ನಿಡಗುಂದಿ: ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯರಾಗಿ ಕಾಂಗ್ರೆಸ್​ ಸದಸ್ಯ ಸಂಜೀವ ಶೆಟ್ಟೆಪ್ಪ ರಾಠೋಡ ಅವಿರೋಧ ಆಯ್ಕೆಯಾಗಿದ್ದಾರೆೆ ಎಂದು ಮುಖ್ಯಾಧಿಕಾರಿ ವಿರೇಶ ಹಟ್ಟಿ ತಿಳಿಸಿದ್ದಾರೆ.

ಇತ್ತೀಚೆಗೆ ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಆಡಳಿತ ಹಾಗೂ ವಿರೋಧ ಪದ ಸದಸ್ಯರ ಹೊಂದಾಣಿಕೆ ಮೇರೆಗೆ ಐವರು ಕಾಂಗ್ರೆಸ್​, ಇಬ್ಬರು ಬಿಜೆಪಿ ಸದಸ್ಯರು ಸೇರಿ ಏಳು ಜನರು ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಳಿಕ, ಸ್ಥಾಯಿ ಸಮಿತಿ ಸದಸ್ಯರು ಸಂಜೀವ ರಾಠೋಡ ಅವರನ್ನು ಅಧ್ಯರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ ಎಂದರು.

ಪಪಂನ 16 ಸ್ಥಾನಗಳ ಪೈಕಿ 9 ಕಾಂಗ್ರೆಸ್​, 6 ಬಿಜೆಪಿ, ಓರ್ವ ಪೇತರ ಸದಸ್ಯರಿದ್ದಾರೆ. ಪೇತರ ಸದಸ್ಯೆ ದೇಸಾಯಿ ಜಂಬಕ್ಕ ಕಾಂಗ್ರೆಸ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಮಿತಿ ಸದಸ್ಯರನ್ನು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಹಾಗೂ ಸಿಬ್ಬಂದಿ ಸನ್ಮಾನಿಸಿದರು.
ಸ್ಥಾಯಿ ಸಮಿತಿ ಸದಸ್ಯರು:

ಸಂಜೀವ ಶೆಟ್ಟೆಪ್ಪ ರಾಠೋಡ ಅಧ್ಯ, ಸದಸ್ಯರಾಗಿ ಹನಮಂತ ಗುಂಡಿನಮನಿ, ಗಣೇಶ ಕೂಚಬಾಳ, ನಬಿರಸೂಲ ಬಾಣಕಾರ, ಆರ್​.ರಾಜು, ಕರಿಯಪ್ಪ ಸಿಂದಗಿ, ಬಸವರಾಜ ವಂದಾಲ ಆಯ್ಕೆಗೊಂಡಿದ್ದಾರೆ.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…