ಸಂಭ್ರಮದಿಂದ ನಡೆದ ಶರಣಮುತ್ಯಾ ರಥೋತ್ಸವ

blank

ತಾಳಿಕೋಟೆ : ಪಟ್ಟಣದ ಆರಾಧ್ಯ ದೈವ ಶ್ರೀ ಸಾಂಭಪ್ರಭು ಶರಣಮುತ್ಯಾ ಜಾತ್ರೋತ್ಸವ ನಿಮಿತ್ತ ಬುಧವಾರ ಸಂಜೆ ಅಪಾರ ಭಕ್ತ ಸಮೂಹದ ಮಧ್ಯೆ ರಥೋತ್ಸವ ಸಡಗರದಿಂದ ನಡೆಯಿತು.

ಬೆಳಗಿನ ಜಾವ ಶರಣಮುತ್ಯಾ ಗದ್ದುಗೆಗೆ ಮಹಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾಮಂಗಳಾರತಿ ಜರುಗಿದವು. ಕರಿಭಾವಿಯಿಂದ ನಂದಿಕೋಲ ಆಗಮಿಸಿತು. ನಂತರ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿತು. ಗೊಂಬೆ ಕುಣಿತ, ಕರಡಿ ಮಜಲು ಮೆರವಣಿಗೆಗೆ ಮೆರಗು ತಂದವು.

ಸಂಜೆ 6ಕ್ಕೆ ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.ರಾಜ್ಯದ ವಿವಿಧ ಕಡೆಗಳಿಂದ ಅಸಂಖ್ಯಾತ ಭಕ್ತರು ಆಗಮಿಸಿದ್ದರು. ಶರಣರ ಮಠದ ಶ್ರೀ ಬಸಣ್ಣ ಶರಣರು, ಶ್ರೀ ಶರಣಪ್ಪ ಶರಣರು ರಥೋತ್ಸವದ ನೇತೃತ್ವ ವಹಿಸಿದ್ದರು.

Share This Article

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…