More

    ಸಿದ್ದು ಕ್ಷೇತ್ರ ಘೋಷಣೆಯಾದ್ರೂ ತಮ್ಮಲ್ಲಿ ಬಂದು ಸ್ಪರ್ಧಿಸುವಂತೆ ಅಭಿಮಾನಿಗಳ ಒತ್ತಡ!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕ್ಷೇತ್ರ ಗೊಂದಲ ಇನ್ನೂ ತೆರೆ ಕಾಣುತ್ತಿಲ್ಲ. ಮೊದಲಿಗೆ ಅವರೇ ಗೊಂದಲದಲ್ಲಿದ್ದರೆ ಇದೀಗ ಕ್ಷೇತ್ರ ಆಯ್ಕೆ ಆದ ಮೇಲೂ ಅವರ ಅಭಿಮಾನಿಗಳು ‘ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿ’ ಎಂದು ಒತ್ತಡ ಹೇರುತ್ತಿದ್ದಾರೆ.

    ಬಾದಾಮಿ ಹಾಗೂ ವರುಣ ಕ್ಷೇತ್ರದ ಜನರು ಇದೀಗ ತಮ್ಮ ಕ್ಷೇತ್ರಕ್ಕೆ ಬರುವಂತೆ ಒತ್ತಡ ಹೇರುತ್ತಿದ್ದಾರೆ. ಬಾದಾಮಿ ಹಾಗೂ ವರುಣ ಕ್ಷೇತ್ರದ ಜನರು ಈ ಬಗ್ಗೆ ಬೆಂಗಳೂರಿನ ಸಿದ್ದು ನಿವಾಸಕ್ಕೆ ಬಂದು ಮನವಿ ಮಾಡುತ್ತಿದ್ದಾರೆ. ಇದೀಗ ಮೂರನೇ ಬಾರಿ ಬೆಂಗಳೂರಿಗೆ ಬಂದು ಸಿದ್ದರಾಮಯ್ಯಗೆ ಅಭಿಮಾನಿಗಳು ಒತ್ತಡ ಹೇರುತ್ತಿರುವುದು.

    ಸಿದ್ದರಾಮಯ್ಯ ನಿವಾಸದ ಬಳಿ ಆಗಮಿಸುತ್ತಿರುವ ಬಾದಾಮಿ ಹಾಗೂ ವರುಣ ಕ್ಷೇತ್ರದ ಜನ ತಮ್ಮ ಕ್ಷೇತ್ರದಲ್ಲೇ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಕೋಲಾರದಿಂದ ಸ್ಪರ್ಧೆ ಮಾಡುವುದಾಗಿ ಸಿದ್ದರಾಮಯ್ಯ ನಿರ್ಧರಿಸಿದ್ದರೂ ಅಭಿಮಾನಿಗಳು ಮಾತ್ರ ಸುಮ್ಮನಾಗುತ್ತಿಲ್ಲ.

    ಕಳೆದ ವಾರ ಚಾಮುಂಡೇಶ್ವರಿ ಕ್ಷೇತ್ರದ ಜನರಿಂದ ಚಾಮುಂಡೇಶ್ವರಿಯಲ್ಲಿಯೇ ಮತ್ತೊಮ್ಮೆ ಸ್ಪರ್ಧಿಸುವಂತೆ ನಡೆದಿದ್ದ ಒತ್ತಡ ಹೇರಲಾಗಿತ್ತು. ಈಗ ಬಾದಾಮಿಗೆ ವಾಪಸ್ ಬರುವಂತೆ ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts