ಹುಬ್ಬಳ್ಳಿ : ಪ್ರಯಾಣಿಕರ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣಗಳ (07339/40) ನಡುವಿನ ನಿತ್ಯದ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.
ಹುಬ್ಬಳ್ಳಿ – ಬೆಂಗಳೂರು ನಿಲ್ದಾಣ ನಡುವೆ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ಜು. 28 ರಿಂದ ಸೆ. 30 ರವರೆಗೆ ಹಾಗೂ ಬೆಂಗಳೂರು – ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ಜು. 29 ರಿಂದ ಅ. 1 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಈ ರೈಲು ಹುಬ್ಬಳ್ಳಿಯಿಂದ ಜು. 27 ರವರೆಗೆ ಮತ್ತು ಬೆಂಗಳೂರಿನಿಂದ ಜು. 28 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು.
ಈ ರೈಲುಗಳ ವೇಳಾಪಟ್ಟಿ, ಬೋಗಿಗಳ ಸಂಯೋಜನೆ ಮತ್ತು ನಿಲುಗಡೆ ತಾಣಗಳಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ನೈಋತ್ಯ ರೈಲ್ವೆ ವಲಯದ ಕಚೇರಿ ಪ್ರಕಟಣೆ ತಿಳಿಸಿದೆ.