More

    ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

    ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.

    ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ ದೂರು ನೀಡಿದ್ದರು. ಮಗ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ತಂದೆ ಭರತ ಜೈನ್ ಹೈಡ್ರಾಮ ಮಾಡಿದ್ದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ತಂದೆ ಮೇಲೆಯೇ ಅನುಮಾನ ಮೂಡಿತ್ತು.

    ಭರತ್ ಜೈನ್​ರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಮಗನ ಹತ್ಯೆಗೆ ಸ್ಥಳೀಯ ಹಂತಕರಿಗೆ ಸುಪಾರಿ ನೀಡಿದ್ದಾಗಿ ತಂದೆ ಬಾಯ್ಬಿಟ್ಟಿದ್ದಾರೆ. ಇವರ ಹೇಳಿಕೆ ಆಧರಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹುಬ್ಬಳ್ಳಿ ತಾಲೂಕಿನ ದೇವರಗಿಡಿಹಾಳ ಗ್ರಾಮದಲ್ಲಿ ಭರತ್ ಜೈನ್​ಗೆ ಸೇರಿದ ತೋಟದ ಮನೆಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

    ಮಗನ ಹತ್ಯೆಗೆ ಸುಪಾರಿ ಕೊಟ್ಟಿದ್ದು ಏಕೆ ಎಂಬ ಕಾರಣ ಇನ್ನೂ ಗೊತ್ತಾಗಿಲ್ಲ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಕೇಶ್ವಾಪುರ ಠಾಣೆ ಪೊಲೀಸ್ ಇನ್​ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ.

    ರಸ್ತೆ ತಿರುವಿನಲ್ಲಿ ಲಗೇಜ್​ ಆಟೋ ಪಲ್ಟಿ: ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಚಿಂತಾಜನಕ

    ಕಲಬುರಗಿ ಕಮಿಷನರ್ ಮತ್ತು ಪತ್ನಿ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ದೂರು, ಎಫ್​ಐಆರ್​ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts