ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಡೆದ ರಸ್ತೆ ಅಪಘಾತವೊಂದರಲ್ಲಿ ಹುಬ್ಬಳ್ಳಿ ಕಿಮ್ಸ್ನ ಮೆಡಿಕಲ್ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಬ್ಬಳ್ಳಿಯಿಂದ ಉತ್ತರಕನ್ನಡ ಹಾಗೂ ಗೋವಾ ಪ್ರವಾಸಕ್ಕೆ ಈ ವಿದ್ಯಾರ್ಥಿಗಳು ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತವಾಗಿದೆ. ಬೊಲೆರೋ ವಾಹನ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದನ್ನೂ ಓದಿರಿ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ: ಅಪರಾಧಿಗೆ ಇಂದು ಶಿಕ್ಷೆ ವಿಧಿಸಿದ ಕೋರ್ಟ್!
ಘಟನೆಯಲ್ಲಿ ಚಿಕ್ಕೋಡಿಯ ಶ್ರೇಯಸ್ ಮೊಟಗಾರ, ಹುಬ್ಬಳ್ಳಿಯ ಪೂಜಾ ಭಟ್ಟ, ರಾಯಚೂರಿನ ಪ್ರೀತಿ ಶಾಸ್ತ್ರಿ, ಕಲಬುರ್ಗಿಯ ಅಂಬೀಕಾ ತಟಕಲ್ಲ, ಪ್ರವೀಣ ಡಿ.ಎಂ. ಗಾಯಗೊಂಡಿದ್ದು, ಇವರನ್ನು ಹುಬ್ಬಳ್ಳಿ ಕಿಮ್ಸ್ ದಾಖಲಿಸಲಾಗಿದೆ. ಮೆಡಿಕಲ್ ವಿದ್ಯಾರ್ಥಿಗಳಾದ ಇವರು ಹುಬ್ಬಳ್ಳಿ ಕಡೆಯಿಂದ ಉತ್ತರಕನ್ನಡ, ಗೋವಾ ವಿವಿಧ ಪ್ರವಾಸಿ ತಾಣಗಳಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡಕೆ ತುಂಬಿಕೊಂಡು ಬರುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ
ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ
ಪ್ರಿಯಕರನ ಕರೆ ಬಂತೆಂದು ಮನೆಯಿಂದ ಹೊರ ಹೋದ ಬಾಲಕಿ ಶವವಾಗಿ ಪತ್ತೆ! ಆ ರಾತ್ರಿಯ ರಹಸ್ಯ ಇಲ್ಲಿದೆ