ಹುಬ್ಬಳ್ಳಿ: ತಾರಿಹಾಳ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯಲ್ಲಿ ಬಳಕೆಯಾಗಿದ್ದ ರಾಸಾಯನಿಕ ಯಾವುದು ಎಂದು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರಾಸಾಯನಿಕ ಮಾದರಿಯನ್ನು ಹುಬ್ಬಳ್ಳಿಯ ಪ್ರಾದೇಶಿಕ ವಿಧಿ ವಿಜ್ಞಾನ ಪ್ರಯೋಗಾಲಯ (ಆರ್ಎಫ್ ಎಸ್ಎಲ್)ಗೆ ರವಾನಿಸಲಿದ್ದಾರೆ.
ರ್ಬತ್ ಡೇ ಪಾಟಿರ್ಗೆ ಬಳಸುವ ಸ್ಪಾರ್ಕಲ್ ಕ್ಯಾಂಡಲ್ ತಯಾರಿಸುತ್ತಿದ್ದ ಐ.ಸಿ. ಫ್ಲೇಮ್ಫ್ಯಾಕ್ಟರಿಯಲ್ಲಿ ಶನಿವಾರ ಸ್ಫೋಟ ಸಂಭವಿಸಿದಾಗ ಅದರ ತೀವ್ರತೆ ಹೆಚ್ಚಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುವಾಗಲೂ ಸ್ಪೋಟಗೊಳ್ಳುತ್ತಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಯಾವ ಯಾವ ಕೆಮಿಕಲ್ ಇಡಲಾಗಿತ್ತು ? ನಿಷೇಧಿತ ಕೆಮಿಕಲ್ ಬಳಸಲಾಗಿತ್ತೇ ? ಎಂಬ ಕುರಿತು ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಮಾದರಿಗಳನ್ನು ಸಂಗ್ರಹಿಸಿ ಆರ್ ಎಫ್ಎಸ್ಎಲ್ನ ರಾಸಾಯನಿಕ ವಿಶ್ಲೇಷಣೆ ವಿಭಾಗಕ್ಕೆ ಪರೀಕ್ಷೆಗಾಗಿ ರವಾನಿಸುವ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ‘ವಿಜಯವಾಣಿ’ ತಿಳಿಸಿದ್ದಾರೆ.
ಮ್ಯಾನೇಜರ್ ಬಂಧನ
ಅಗ್ನಿ ಅವಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐ.ಸಿ.ಫ್ಲೇಮ್ ಫ್ಯಾಕ್ಟರಿ ಮ್ಯಾನೇಜರ್ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದಾರೆ. ಫ್ಯಾಕ್ಟರಿ ಮಾಲೀಕ ಗದಗ ಮೂಲದ, ಸದ್ಯ ಮುಂಬೈನಲ್ಲಿ ವಾಸವಾಗಿರುವ ಅಬ್ದುಲ್ ಖಾದಿರ್ ಶೇಖ್ ತಲೆಮರೆಸಿಕೊಂಡಿದ್ದಾನೆ. ಕಟ್ಟಡ ಮಾಲೀಕ ಸೇರಿದಂತೆ ಹಲವರ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಐವರು ಗಾಯಾಳುಗಳಿಗೆ ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರಿದಿದೆ.