ಬೀದರ್: ಎಮ್ಮೆಗೆ ನೀರು ಕುಡಿಸಲು ಹೋದ ಪತ್ನಿ ಶಾಕ್ಗೆ ಒಳಗಾದಾಗ ಆಕೆಯನ್ನು ರಕ್ಷಿಸಲು ಪತಿ ಧಾವಿಸಿದ್ದು, ಕೊನೆಗೆ ಇಬ್ಬರೂ ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಬೀದರ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಮನ್ಮಳ್ಳಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಶಿವಾರೆ ಹಾಗೂ ಅವರ ಪತ್ನಿ ಶರಣಮ್ಮ ಸಾವಿಗೀಡಾದವರು. ಮನ್ನಳ್ಳಿ- ಚಿಂತಲಗಿ ಮಧ್ಯೆ ರಸ್ತೆ ಪಕ್ಕ ವಿದ್ಯುತ್ ತಂತಿ ಕಡಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಕಂಬದಲ್ಲಿ ತುಂಡಾದ ತಂತಿ ನೀರಲ್ಲಿ ಬಿದ್ದಿರುವುದು ಶರಣಮ್ಮ ಅವರಿಗೆ ತಿಳಿದಿರಲಿಲ್ಲ. ಅವರು ಎಮ್ಮೆಗೆ ನೀರು ಕುಡಿಸಲು ಹೋಗಿದ್ದಾಗ ವಿದ್ಯುತ್ ಶಾಕ್ಗೆ ಒಳಗಾಗಿದ್ದಾರೆ. ಅಲ್ಲೇ ಇದ್ದ ಪತಿ ಮಲ್ಲಿಕಾರ್ಜುನ ಕೂಡಲೇ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಇಬ್ಬರೂ ವಿದ್ಯುತ್ ಸ್ಪರ್ಶಕ್ಕೀಡಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮನ್ನಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು; ವಾಹನ ಚಲಾಯಿಸುತ್ತಿದ್ದ ಚಿತ್ರನಟ ನಾಗಭೂಷಣ್ ಮದ್ಯಪಾನ ಮಾಡಿದ್ದರಾ?