ಬೆಂಗಳೂರು: ಎಲ್ಲರೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಇರುವಾಗ ಇಲ್ಲೊಂದು ಮನೆಯಲ್ಲಿ ಶೋಕದ ವಾತಾವರಣ ಉಂಟಾಗಿದೆ. ಹಬ್ಬದ ದಿನದಂದೇ ದುಷ್ಕರ್ಮಿಗಳು ಲಾಂಗು ಝಳಪಿಸಿದ್ದು, ಎರಡು ಜೀವಗಳು ಬಲಿಯಾಗಿವೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಕಾಶಿನಗರದ ಶಾಂತರಾಜು ಹಾಗೂ ಪ್ರೇಮಲತಾ ದಂಪತಿ ಕೊಲೆಯಾದವರು. ಹಾಡಹಗಲೇ ದಾಳಿ ಇಟ್ಟ ದುಷ್ಕರ್ಮಿಗಳು ಈ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…
ಸ್ಥಳಕ್ಕೆ ಕುಮಾರಸ್ವಾಮಿ ಬಡಾವಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಯಾರು ಈ ಕೃತ್ಯವೆಸಗಿದ್ದಾರೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
6 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ವಸತಿ ಬಡಾವಣೆ ತೆರವು; ಜೆಸಿಬಿ ಮೂಲಕ ನಾಶಪಡಿಸಿದ ಅಧಿಕಾರಿಗಳು
ಕಷ್ಟ ಎಂದು ಕಿಡ್ನಿ ಮಾರಲಿಕ್ಕೆ ಮುಂದಾದ ಮಹಿಳೆಗೇ ಮೋಸ ಮಾಡಿದ್ರು; ನಯವಾಗೇ 7.97 ಲಕ್ಷ ರೂ. ಪಡೆದ ಸೈಬರ್ ವಂಚಕರು