ಬಾವಿಗೆ ಬಿದ್ದ ಪತಿ, ಪತ್ನಿ ರಕ್ಷಣೆ

blank

ಕಾರ್ಕಳ: ಕಾರ್ಕಳದ ಕಲ್ಲೊಟ್ಟೆ ಪೆರ್ವಾಜೆ ಬಳಿಯಲ್ಲಿ ಭಾನುವಾರ ಆಕಸ್ಮಿಕವಾಗಿ ಬಾವಿಗೆ ಬಿದ್ದ ಪತ್ನಿ ಹಾಗೂ ರಕ್ಷಣೆಗೆ ಇಳಿದ ಪತಿಯನ್ನು ಅಗ್ನಿಶಾಮಕ ದಳದವರು ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ಸುಮಾರು 60 ಅಡಿ ಆಳವಿರುವ ಹಾಗೂ 20 ಅಡಿಯಷ್ಟು ನೀರಿರುವ ಬಾವಿಗೆ ಭಾನುವಾರ ಬೆಳಗ್ಗೆ ಅನಿತಾ ಮಲ್ಯ(57) ಎಂಬುವರು ಆಕಸ್ಮಿಕವಾಗಿ ಬಿದ್ದಿದ್ದು, ಅವರ ರಕ್ಷಣೆಗೆ ಗಂಡ ಅಣ್ಣಪ್ಪ ಮಲ್ಯ(59) ಬಾವಿಗೆ ಇಳಿದಿದ್ದು, ಬಳಿಕ ಇಬ್ಬರೂ ಬಾವಿಯಿಂದ ಮೇಲೆ ಬರಲು ಸಾಧ್ಯವಿಲ್ಲದೆ ಇಬ್ಬರೂ ನೀರಿನ ಪೈಪ್ ಹಿಡಿದು ಬಾವಿಯಲ್ಲೇ ಸಿಲುಕಿಕೊಂಡು ನೆರವಿಗೆ ಮೊರೆಯಿಡುತ್ತಿದ್ದರು. ಕೂಡಲೇ ಕಾರ್ಕಳ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ನಡೆಸಿ ಪತಿ ಹಾಗೂ ಪತ್ನಿಯನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಅಗ್ನಿಶಾಮಕ ದಳದ ಅಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ್, ಸಿಬ್ಬಂದಿ ಹರಿಪ್ರಸಾದ್ ಶೆಟ್ಟಿಗಾರ್, ಸಂಜಯ್, ಹಸನ್ ಮುಲ್ತಾನಿ, ರವಿಚಂದ್ರ ಕೊರವರ ಭಾಗವಹಿಸಿದ್ದರು.

ವಿದ್ಯೆಯ ಜತೆ ಸಂಸ್ಕಾರ ಅಗತ್ಯ

ಬೆಳಪು ಸಹಕಾರಿಗೆ ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಆಯ್ಕೆ

 

Share This Article

ಮಕ್ಕಳು ಪ್ರತಿದಿನ ತಿನ್ನಲೇ ಬೇಕಾದ ಹಣ್ಣುಗಳಿವು..ಕಾರಣ ಹೀಗಿದೆ | Fruits

Fruits: ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ನೆನಪಿನ ಶಕ್ತಿ ಹೆಚ್ಚಿಸಲು ಹಣ್ಣುಗಳು ಬಹಳ ಪ್ರಯೋಜನಕಾರಿ. ಹಣ್ಣುಗಳಲ್ಲಿ…

ನೀವು ಕೂಡ ಇದೇ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈರುಳ್ಳಿ ತಿನ್ನಲೇಬೇಡಿ.. onion

onion : ಈರುಳ್ಳಿಯಿಂದ ಹಲವು ಪ್ರಯೋಜನಗಳಿವೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.…

ನೀವು ಹೆಚ್ಚಾಗಿ ಹೈ ಹೀಲ್ಸ್ ಧರಿಸುತ್ತೀರಾ? ಹುಷಾರಾಗಿರಿ.. heels

heels : ಮಹಿಳೆಯರು ತಮ್ಮ ಬಟ್ಟೆಗಳಿಗೆ ಹೊಂದಿಕೆಯಾಗುವಂತೆ ಹೈ ಹೀಲ್ಸ್ ಧರಿಸಿ ಸ್ಟೈಲಿಶ್ ಆಗಿ ಕಾಣುವುದು…