ಪಿರಿಯಾಪಟ್ಟಣ: ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದು, ಆರೋಪಿಯನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಹೊನ್ನೇನಹಳ್ಳಿ ಗ್ರಾಮದ ಪ್ರೇಮಾ(36) ಕೊಲೆಯಾದವರು. ಈಕೆಯ ಪತಿ ಕುಮಾರ್ ಬಂಧಿತ. 18 ವರ್ಷಗಳ ಹಿಂದೆ ಪ್ರೇಮಾಳನ್ನು ಕುಮಾರ್ ವಿವಾಹವಾಗಿದ್ದು, ಇಬ್ಬರು ಗಂಡು ಮಕ್ಕಳಿದ್ದಾರೆ. ಆರೋಪಿ ಕುಮಾರ್ ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದ. ಬುಧವಾರ ಮಧ್ಯರಾತ್ರಿ ಜಗಳ ತೆಗೆದಿದ್ದು ಗುರುವಾರ ಬೆಳಗಿನ ಜಾ ಮಕ್ಕಳ ಎದುರಲ್ಲೇ ಟವೆಲ್ನಿಂದ ಕುತ್ತಿಗೆ ಬಿಗಿದು ಕೊಲೆಗೈದು ಪರಾರಿಯಾಗಿದ್ದ ಎಂದು ಪ್ರೇಮಾ ಅವರ ಸಹೋದರ ಚೆಲುವರಾಜು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ಗೋಪಾಲಕೃಷ್ಣ, ಇನ್ಸ್ಫೆಕ್ಟರ್ ಕೆ.ವಿ.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.