More

    ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಪತ್ನಿ ವಾಪಸ್ ಬಂದಿಲ್ಲ ಎಂದು ಪತಿ ಆತ್ಮಹತ್ಯೆ

    ಬೆಂಗಳೂರು: ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಪತ್ನಿಗೆ ವಾಪಸ್​ ಬರಲು ಹೇಳಿದರೂ ಮರಳದ್ದರಿಂದ ಬೇಸತ್ತ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಇಟ್ಟಮಡುವಿನ ಮಾರುತಿ ನಗರದಲ್ಲಿ ಈ ಘಟನೆ ಸಂಭವಿಸಿದೆ.

    ನವೀನ್​ ಕುಮಾರ್​ (33) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಬೆಂಗಳೂರಿನ ಇಟ್ಟಮಡುವಿನ ಮಾರುತಿ ನಗರದಲ್ಲಿ ವಾಸವಿದ್ದ ಈತ ಆರು ವರ್ಷಗಳ ಹಿಂದೆ ಚೈತ್ರಾ ಎಂಬಾಕೆಯನ್ನು ಮದುವೆಯಾಗಿದ್ದ.

    ಇದನ್ನೂ ಓದಿ: ಅವಳ ಮನೆಗೆ ಅವನು ಬಂದಾಗ ಹಿಡ್ಕೊಂಡ ಜನರು; ಇಬ್ಬರನ್ನೂ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ: ಅನೈತಿಕ ಸಂಬಂಧ ಹೊಂದಿದ್ದಕ್ಕೆ ಘೋರ ಶಿಕ್ಷೆ?

    ಚೆನ್ನಾಗಿಯೇ ಇದ್ದ ಇವರ ಮಧ್ಯೆ ಇತ್ತೀಚೆಗೆ ಭಿನ್ನಾಭಿಪ್ರಾಯ ಮೂಡಿದ್ದು, ಇಬ್ಬರ ನಡುವೆ ಜಗಳವಾಗಿತ್ತು. ಇದೇ ಗಲಾಟೆಯಿಂದ ಬೇಸರಗೊಂಡ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಪತ್ನಿಗೆ ಮನೆಗೆ ಮರಳುವಂತೆ ಕೋರಿದ್ದರೂ ಆಕೆ ಬರಲಿಲ್ಲ.

    ಇದನ್ನೂ ಓದಿ: ಎಚ್ಚರ.. ಎಚ್ಚರ.. ಹೊರಗೆಲ್ಲೂ ಹೋಗದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೂ ಬಂದಿದೆ ಒಮಿಕ್ರಾನ್​!

    ‘ಆಗಿದ್ದಾಯ್ತು ಬಾ..’ ಎಂದು ಪತ್ನಿಗೆ ಕರೆ ಮಾಡಿ ಮನೆಗೆ ವಾಪಸ್​ ಬರುವಂತೆ ಕೇಳಿಕೊಂಡರೂ ಆಕೆ ಬಂದಿರಲಿಲ್ಲ. ಇದರಿಂದ ತೀವ್ರ ಮನನೊಂದಿದ್ದ ನವೀನ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ‘ನನ್ನ ಗಂಡನ ಜತೆ ನಿಂಗೇನು ಕೆಲಸ?’ ಎಂದು ಗುಜರಿ ಅಂಗಡಿಗೆ ಬಂದಿದ್ದ ಮಹಿಳೆಗೆ ಬಾರಿಸಿದಳು; ಪತ್ನಿ ವಿರುದ್ಧ ಪತಿಯಿಂದಲೇ ದೂರು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts