ದೊಡ್ಡಬಳ್ಳಾಪುರ: ತಾಲ್ಲೂಕಿನ ಕಂಟನಕುಂಟೆ ರಾಜ್ಯ ಹೆದ್ದಾರಿ ಬಳಿ ಬೆಳ್ಳಂ ಬೆಳ್ಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಹಿಂದಿನಿಂದ ಗುದ್ದಿದ ರಭಸಕ್ಕೆ ಸ್ಕೂಟರ್ನಲ್ಲಿದ್ದವರು ಕೆಳಗೆ ಬಿದ್ದ ಮೂವರಲ್ಲಿ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಪ್ರಕಾಶ್(೩೫) ಎಂದು ಗುರುತಿಸಲಾಗಿದೆ. ಪತ್ನಿಗೆ ಗಂಭೀರ ಗಾಯ, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದೆ. ಪತ್ನಿ-ಪತ್ನಿ-ಮಗುವಿನ ಕಣ್ಣೇದುರಿಗೆ ಪತಿ ಗಂಭೀರವಾಗಿ ಗಾಯಗೊಂಡು ನರಳಾಡಿ ಪ್ರಾಣಬಿಟ್ಟಿದ್ದಾರೆ.
ಪ್ರಕಾಶ್ ತಮ್ಮ ಪತ್ನಿ ಹಾಗೂ ಮಗು ಜತೆಗೆ ಸ್ಕೂಟರ್ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್ ಹಿಂದಿನಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರಕಾಶ್ ನಿಯಂತ್ರಣ ತಪ್ಪಿ ಸ್ಕೂಟರ್ ಸಮೇತ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡ ಪ್ರಕಾಶ್ ನರಳಾಡಿ ಪತ್ನಿ, ಮಗುವಿನ ಎದುರೇ ಜೀವ ಬಿಟ್ಟಿದ್ದಾರೆ.ಬೆಂಗಳೂರು – ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ದುರ್ಘಟನೆ.
ಹಿಂದೂಪುರದಿಂದ ಬೆಂಗಳೂರು ಕಡೆ ಹೊರಡುತ್ತಿದ್ದ ಖಾಸಗಿ ಬಸ್ ಇದಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆದುತ್ತಿದೆ.