More

    ಪತ್ನಿ-ಮಗುವಿನ ಕಣ್ಣೇದುರಿಗೆ ನರಳಾಡಿ ಪ್ರಾಣಬಿಟ್ಟ ಪತಿ

    ದೊಡ್ಡಬಳ್ಳಾಪುರ: ತಾಲ್ಲೂಕಿನ ಕಂಟನಕುಂಟೆ ರಾಜ್ಯ ಹೆದ್ದಾರಿ ಬಳಿ ಬೆಳ್ಳಂ ಬೆಳ್ಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್​ ಹಿಂದಿನಿಂದ ಗುದ್ದಿದ ರಭಸಕ್ಕೆ ಸ್ಕೂಟರ್​ನಲ್ಲಿದ್ದವರು ಕೆಳಗೆ ಬಿದ್ದ ಮೂವರಲ್ಲಿ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಮೃತ ವ್ಯಕ್ತಿಯನ್ನು ಪ್ರಕಾಶ್(೩೫) ಎಂದು ಗುರುತಿಸಲಾಗಿದೆ. ಪತ್ನಿಗೆ ಗಂಭೀರ ಗಾಯ, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದೆ. ಪತ್ನಿ-ಪತ್ನಿ-ಮಗುವಿನ ಕಣ್ಣೇದುರಿಗೆ ಪತಿ ಗಂಭೀರವಾಗಿ ಗಾಯಗೊಂಡು ನರಳಾಡಿ ಪ್ರಾಣಬಿಟ್ಟಿದ್ದಾರೆ.

    ಪ್ರಕಾಶ್‌ ತಮ್ಮ ಪತ್ನಿ ಹಾಗೂ ಮಗು ಜತೆಗೆ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್‌ ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರಕಾಶ್‌ ನಿಯಂತ್ರಣ ತಪ್ಪಿ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡ ಪ್ರಕಾಶ್‌ ನರಳಾಡಿ ಪತ್ನಿ, ಮಗುವಿನ ಎದುರೇ ಜೀವ ಬಿಟ್ಟಿದ್ದಾರೆ.ಬೆಂಗಳೂರು – ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ದುರ್ಘಟನೆ.

    ಹಿಂದೂಪುರದಿಂದ ಬೆಂಗಳೂರು ಕಡೆ ಹೊರಡುತ್ತಿದ್ದ ಖಾಸಗಿ ಬಸ್ ಇದಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆದುತ್ತಿದೆ.

    ಅಕ್ಕ- ತಂಗಿ ಇಬ್ಬರು ಪ್ರೆಗ್ನೆಂಟ್​; ನಟಿ ಮನೆಯಲ್ಲಿ ಡಬಲ್ ಸಂಭ್ರಮ​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts