More

    ಸೀರೆಯಿಂದ ಕತ್ತು ಬಿಗಿದು ಪತ್ನಿ ಹತ್ಯೆಗೈದ ಪತಿ

    ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತಿಯಿಂದಲೇ ಪತ್ನಿಯನ್ನು ಹತ್ಯೆಗೈದಿರುವಂತಹ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ನೇತ್ರಾವತಿ ಮೃತ ಪತ್ನಿ. ನೇತ್ರಾವತಿಯನ್ನು ನಿನ್ನೆ ರಾತ್ರಿ ಹತ್ಯೆ ಮಾಡಿ ವೆಂಕಟೇಶ್​ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಾಗಡಿಯ ಗೇರುಪುರ ಮೂಲದ ವೆಂಕಟೇಶ್ ದಂಪತಿ ನಾಲ್ಕು ವರ್ಷಗಳಿಂದ ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ವಾಸವಾಗಿದ್ದರು.

    ಹಣ ತರುವಂತೆ ನಿತ್ಯ ಗಂಡ, ಹೆಂಡತಿಯನ್ನು ಪಿಡಿಸುತ್ತಿದ್ದ. ನಿನ್ನೆ ರಾತ್ರಿ ಕೂಡ ಕುಡಿದು ಗಲಾಟೆ ಮಾಡಲಾಗಿದೆ. ಪತ್ನಿ ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಕೊಲೆ ಆರೋಪ ಕೇಳಿಬಂದಿದೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಯಕ್ಷಗಾನ ಕಲಾವಿದನಾಗಿ ವೃತ್ತಿಜೀವನ ಆರಂಭಿಸಿದವ ಇಂದು ಅಂತರಾಷ್ಟ್ರೀಯ ಮನ್ನಣೆ ಪಡೆದ ಸ್ಯಾಂಡಲ್‌ವುಡ್ ಸ್ಟಾರ್​ ನಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts