ನೆಲಮಂಗಲ: ತನ್ನ ಇಬ್ಬರು ಹೆಣ್ಣು ಮಕ್ಕಳ ಜತೆ ಹೆಂಡತಿಯನ್ನು ತವರು ಮನೆಗೆ ಕಳುಹಿಸಿದ ಗಂಡನ ಆ ಬಳಿಕದ ಕೃತ್ಯ ಆ ಮೂವರಿಗೆ ಬರಸಿಡಿಲಿನಂತೆ ಎರಗಿದೆ. ಈ ದುರಂತ ಪ್ರಕರಣ ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರು ಉತ್ತರ ತಾಲೂಕು ಬೈಲಕೋನಹಳ್ಳಿಯ ಆಶೀರ್ವಾದ್ ಬಡಾವಣೆಯಲ್ಲಿ ಆಂಧ್ರಪ್ರದೇಶದ ಚಿತ್ತೂರು ಸಮೀಪದ ಜಿ.ಡಿ. ನಲ್ಲೂರು ಮೂಲದ ಪುರುಷೋತ್ತಮ ರೆಡ್ಡಿ ಎಂಬ 35 ವರ್ಷದ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳೊಂದಿಗೆ ನೆಲೆಸಿದ್ದ.
ಆದರೆ ಈತ ಹೆಣ್ಣು ಮಕ್ಕಳಿಬ್ಬರ ಸಹಿತ ಹೆಂಡತಿಯನ್ನು ತವರಿಗೆ ಕಳುಹಿಸಿ, ಬಳಿಕ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ಫ್ಯಾನ್ಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದ್ದಕ್ಕಿದ್ದಂತೆ ಹೆಚ್ಚಾಯ್ತು ಕೋವಿಡ್ ಕೇಸ್; ಚೀನಾದಲ್ಲಿಂದು 2 ವರ್ಷದಲ್ಲೇ ಅತ್ಯಧಿಕ ದೈನಂದಿನ ಪ್ರಕರಣ!
ಗಂಡ-ಹೆಂಡಿರ ಜಗಳ ಕೊಚ್ಚಿ ಚುಚ್ಚಿಕೊಳ್ಳುವ ತನಕ; ಪತ್ನಿಯ ಸಾವು, ಪತಿ ಪರಿಸ್ಥಿತಿ ಗಂಭೀರ..