More

    ಕೋಲಾರ | ಪತ್ನಿಯನ್ನು ಹತ್ಯೆಗೈದು ನೇರವಾಗಿ ಪೊಲೀಸ್ ಠಾಣೆಗೆ ಹೋದ ಪತಿ!

    ಕೋಲಾರ: ಶೀಲ ಶಂಕಿಸಿ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡವಾಣೆಯಲ್ಲಿ ನಡೆದಿದೆ. ನಂದಿನಿ(34) ಹತ್ಯೆಗೀಡಾದ ಗೃಹಿಣಿ.

    ನಾಗರಾಜ್ ಎಂಬಾತ ಪತ್ನಿಯ ಶೀಲ ಶಂಕಿಸಿ, ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಆರೋಪಿ ನೇರವಾಗಿ ಬಂಗಾರಪೇಟೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇದನ್ನೂ ಓದಿ: VIDEO| ಉರ್ಫಿ ಜಾವೇದ್ ಹೊಸ ಅವತಾರ; ಮೈಮುಚ್ಚಿಕೊಳ್ಳಲು ಹಾವನ್ನೇ ಬಳಸಿದ ನಟಿ!

    ಗಂಡನಿಂದ ಮಾನಸಿಕ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ

    ವಿಜಯನಗರ: ಗಂಡನಿಂದ ಮಾನಸಿಕ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ನಡೆದಿದೆ. 33 ವರ್ಷದ ರೂಪ(ಬಸಮ್ಮ) ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯಗೆ ಶರಣಾಗಿರುವ ಮಹಿಳೆ.

    ನಾನು, ನನ್ನ ಗಂಡನನ್ನು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೆ. ಪರಿಪರಿಯಾಗಿ ಕೇಳಿಕೊಂಡರೂ, ನನ್ನ ಜೊತೆಗೆ ಜೀವನ ನಡೆಸುತ್ತಿಲ್ಲ. ಆತ್ಮಹತ್ಯೆ ಮಹಾಪಾಪ ಎಂಬುದು ಗೊತ್ತಿದೆ. ಆದರೂ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಡೆತ್​ನೋಟ್ ಬರೆದಿಟ್ಟು ರೂಪ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಮೃತಳ ತಾಯಿ ನೀಡಿದ ದೂರಿನಂತೆ ಪತಿ ಅರ್ಜುನ್ ಪರಶೆಟ್ಟಿ ಮತ್ತು ಅವರ ಕುಟುಂಬಸ್ಥರ ಮೇಲೆ ಹೂವಿನ ಹಡಗಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇದನ್ನೂ ಓದಿ: ತರಬೇತಿಯಲ್ಲಿದ್ದಾಗಲೇ ಮಹಿಳಾ ಸಬ್​ಇನ್ಸ್​ಪೆಕ್ಟರ್ ಬಂಧನ; ಏನಿದು ಪ್ರಕರಣ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts