More

    ಬಿಜೆಪಿಯ ಆರೋಪ ಹಾಸ್ಯಾಸ್ಪದ, ಹೂವಿನಹಡಗಲಿ ಶಾಸಕ ಪಿ.ಟಿ.ಪರಮೇಶ್ವನಾಯ್ಕ ಟೀಕೆ

    ಹೂವಿನಹಡಗಲಿ: ಬಿಜೆಪಿ ಮುಖಂಡರು ಪ್ರಚಾರ ಗಿಟ್ಟಿಸಿಕೊಳ್ಳಲು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಪಿ.ಟಿ.ಪರಮೇಶ್ವನಾಯ್ಕ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದರು. ತಾಲೂಕಿನಲ್ಲಿ ಯಾರ ಆಡಳಿತದ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ ಮತ್ತು ಯಾವ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂಬುದರ ಬಗ್ಗೆ ದಾಖಲೆಗಳಿವೆ. ಯಾವ ಇಲಾಖೆಗಳಲ್ಲಿ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದಕ್ಕೆ ಅಧಿಕಾರಿಗಳ ಸಮ್ಮುಖದಲ್ಲಿ ತನಿಖೆ ನಡೆದಾಗ ಯಾರು ಭ್ರಷ್ಟಾಚಾರದ ರಾಜಕಾರಣ ನಡೆಸಿದ್ದಾರೆ ಎಂಬುದು ಬೆಳಕಿಗೆ ಬರುತ್ತದೆ ಎಂದರು.

    ರಾಜ್ಯದಲ್ಲಿ ಡಬಲ್ ಗುಂಡಿಗೆ ಸರ್ಕಾರ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.40 ಕಮಿಷನ್ ಪಡೆಯುತ್ತಿದೆ ಎಂಬ ಆರೋಪವನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯವರು ನನ್ನ ಮೇಲೆ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಲಾಟರಿಯಲ್ಲಿ ಗೆಲುವು ಸಾಧಿಸಿದ್ದೇನೆ ಎಂದು ಹೇಳುವ ಮೂಲಕ ಮತದಾರರ ನಿರ್ಣಯಕ್ಕೆ ಅಗೌರವ ತೋರಿದ್ದಾರೆ ಎಂದರು.

    ಒಂಬತ್ತು ವರ್ಷಗಳಿಂದ ತಾಲೂಕು ಅಭಿವೃದ್ಧಿ ಕೆಲಸಗಳಿಂದ ಮುಂದೆ ಸಾಗುತ್ತಿದೆ. ಸಾರ್ವಜನಿಕರು ಶಾಂತಿಯುತವಾಗಿದ್ದಾರೆ. ಆದರೆ, ಬಿಜೆಪಿಯವರು ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದು, ತಾಲೂಕಿನ ಅಭಿವೃದ್ಧಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಬಹಿರಂಗ ಚರ್ಚೆಗೆ ನಾವು ಬರುವ ಅವಶ್ಯಕತೆಯಿಲ್ಲ. ಕಾಂಗ್ರೆಸ್ ಎರಡೂ ಬ್ಲಾಕ್‌ನವರು ಬರುತ್ತಾರೆ. ಅವರಿಗೆ ಆರೋಪ ಮಾಡುವವರು ಉತ್ತರ ನೀಡಲಿ ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ್ ಚಿದಾನಂದ ಮಾತನಾಡಿ 10 ವರ್ಷಗಳಿಂದ ಕ್ಷೇತ್ರದಲ್ಲಿ ಬಿಜೆಪಿ ಹೆಸರಿಲ್ಲದಂತಾಗಿದೆ. ಆ ಕಾರಣಕ್ಕಾಗಿ ನಾವೂ ಇದ್ದೀವಿ ಎಂಬುದಕ್ಕೆ ಜನಜಾಗೃತಿ ಜಾಥಾ ಮಾಡುತ್ತಿದೆ ಎಂದರು.

    ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಶಿವಯೋಗಿ, ಹೂವಿನಹಡಗಲಿ ಬ್ಲಾಕ್ ಅಧ್ಯಕ್ಷ್ಪ ಪರಮೇಶ್ವರಪ್ಪ,ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ, ಉಪಾಧ್ಯಕ್ಷ ತಿಮ್ಮಣ್ಣ, ಸದಸ್ಯರಾದ ಹನುಮಂತಪ್ಪ, ಶಫಿಸಾಬ್, ಮುಖಂಡರಾದ ಹೊಸಕೆರಿ ಬೀರಪ್ಪ, ಎಲ್.ಜಿ.ಹೊನ್ನಪ್ಪನವರ್, ಹನುಮಂತಪ್ಪ, ಶ್ರೀಧರ್, ಚಂದ್ರನಾಯ್ಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts