More

    VIDEO| ಚಲಿಸುತ್ತಿದ್ದ ಬಸ್‌ನ ಹಿಂಬದಿ ಚಕ್ರದಡಿ ತಲೆ ಇಟ್ಟು ಪ್ರಾಣ ಬಿಡಲು ಮುಂದಾದ ವ್ಯಕ್ತಿ

    ಹೈದರಾಬಾದ್: ಚಲಿಸುತ್ತಿದ್ದ ಬಸ್‌ನ ಹಿಂಬದಿಯ ಚಕ್ರದ ಕೆಳಗೆ ಚಕ್ರದಡಿ ತಲೆ ಇಟ್ಟು ಪ್ರಾಣವನ್ನು ಬಿಟ್ಟಿರುವ ಘಟನೆ ತೆಲಂಗಾಣದ ಹೈದರಾಬಾದ್​ನ ಗಚಿಬೌಲಿಯಲ್ಲಿ ಎಂಬಲ್ಲಿ ನಡೆದಿದೆ.

    ಇದನ್ನೂ ಓದಿ: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕಿಸ್ತಾನ ಮೂಲದ ಅಕೌಂಟ್ ನಂಬರ್ ನೀಡಿ ಹಣಕ್ಕೆ ಬೇಡಿಕೆ

    ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನುಪಶ್ಚಿಮ ಬಂಗಾಳ ಮೂಲದ ಬಿಸು ರಜಬ್ (40) ಎಂದು ಗುರುತಿಸಲಾಗಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಭಾನುವಾರ ಸಂಜೆ ಬಸ್​​ ಕೊಂಡಾಪುರ ಕ್ರಾಸ್‌ರೋಡ್‌ಗೆ ಬಂದು ಇದ್ದಕ್ಕಿದ್ದಂತೆ ನಿಧಾನವಾಗಿ ಚಲಿಸುತ್ತಿದ್ದ ಸರ್ಕಾರಿ ಬಸ್‌ನಡಿ ನುಗ್ಗಿದ್ದಾನೆ.

    ಚಾಲಕ ಬ್ರೇಕ್ ಹಾಕಿದರೂ ಪ್ರಯೋಜನವಾಗಲಿಲ್ಲ. ಬಸ್ಸು ಆತನ ಮೇಲೆ ಹರಿದಿದ್ದು, ಸ್ಥಳದಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ಆತನನ್ನು ಹೊರಗೆಳೆದು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಆದರೆ ದುರದೃಷ್ಟವಶಾತ್​ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಪ್ರಾಣವನ್ನು ಬಿಟ್ಟಿದ್ದಾನೆ.

    ಈ ಘಟನೆಯು ಸ್ಥಳದಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts