More

    ಪರೀಕ್ಷೆಗೆ ಒಂದು ನಿಮಿಷ ತಡವಾಗಿದ್ದಕ್ಕೆ ಒಳ ಬಿಡದ ಸಿಬ್ಬಂದಿ; ಮನನೊಂದು ಪ್ರಾಣಬಿಟ್ಟ ವಿದ್ಯಾರ್ಥಿ

    ಹೈದರಾಬಾದ್: ಪರೀಕ್ಷೆ ಕೇಂದ್ರಕ್ಕೆ ಒಂದು ನಿಮಿಷ ತಡವಾಗಿ ಆಗಮಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಒಳಬಿಡದೆ ಸತಾಯಿಸಿದ ಕಾರಣ ಆತ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಟೇಕುಂ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಇವರು 11ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಆದಿಲಾಬಾದ್ ಜಿಲ್ಲೆಯ ಸತ್ನಾಲಾ ಅಣೆಕಟ್ಟಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ಇದನ್ನೂ ಓದಿ: ನಿಮ್ಮನ್ನು ಮುಂದಿನ 10 ವರ್ಷಗಳ ಬ್ಯುಸಿಯಾಗಿರಿಸುತ್ತೇವೆ; ಸಂದೇಶ್​​ಖಾಲಿ ಆರೋಪಿ ಪರ ವಕೀಲರಿಗೆ ಕೋರ್ಟ್ ಛೀಮಾರಿ

    ಈ ಕುರಿತು ಪ್ರತಿಕ್ರಿಯಿಸಿರುವ ಆದಿಲಾಬಾದ್​ ಜಿಲ್ಲಾ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು, ನನ್ನನ್ನು ಕ್ಷಮಿಸಿ ಅಪ್ಪಾ, ಈ ಆಘಾತವನ್ನು ನಿಭಾಯಿಸಲು ನನಗೆ ಸಾಧ್ಯವಾಗುತ್ತಿಲ್ಲ, ನೀವು ನನಗಾಗಿ ಬಹಳಷ್ಟು ಮಾಡಿದ್ದೀರಿ, ಆದರೆ ನಾನು ನಿಮಗಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ಒಂದು ನಿಮಿಷ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದಕ್ಕೆ ನನ್ನನ್ನು ಒಳಬಿಡಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ತೆಯಾಗಿರುವ ಡೆತ್​ನೋಟ್​ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇತ್ತ ವಿದ್ಯಾರ್ಥಿಯ ಸಾವು ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದು ಹಲವರು ತೆಲಂಗಾಣ ರಾಜ್ಯ ಶಿಕ್ಷಣ ಮಂಡಳಿಯ ನಿಯಮಗಳಿಗೆ ಕಿಡಿಕಾರಿದ್ದಾರೆ. ಒಂದು ನಿಮಿಷ ತಡವಾದರು ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯಲು ಬಿಡದಿರುವುದು ಯಾವ ರೀತಿಯ ನ್ಯಾಯ. ಕೂಡಲೇ ಈ ರೀತಿಯ ನಿಯಮಗಳನ್ನು ಹಿಂಪಡೆಯಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts