ಪರೀಕ್ಷೆಗೆ ಒಂದು ನಿಮಿಷ ತಡವಾಗಿದ್ದಕ್ಕೆ ಒಳ ಬಿಡದ ಸಿಬ್ಬಂದಿ; ಮನನೊಂದು ಪ್ರಾಣಬಿಟ್ಟ ವಿದ್ಯಾರ್ಥಿ

ಹೈದರಾಬಾದ್: ಪರೀಕ್ಷೆ ಕೇಂದ್ರಕ್ಕೆ ಒಂದು ನಿಮಿಷ ತಡವಾಗಿ ಆಗಮಿಸಿದ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಒಳಬಿಡದೆ ಸತಾಯಿಸಿದ ಕಾರಣ ಆತ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಆದಿಲಾಬಾದ್​ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಟೇಕುಂ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಇವರು 11ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಆದಿಲಾಬಾದ್ ಜಿಲ್ಲೆಯ ಸತ್ನಾಲಾ ಅಣೆಕಟ್ಟಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: … Continue reading ಪರೀಕ್ಷೆಗೆ ಒಂದು ನಿಮಿಷ ತಡವಾಗಿದ್ದಕ್ಕೆ ಒಳ ಬಿಡದ ಸಿಬ್ಬಂದಿ; ಮನನೊಂದು ಪ್ರಾಣಬಿಟ್ಟ ವಿದ್ಯಾರ್ಥಿ