ನವದೆಹಲಿ: ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಟೀಮ್ ಇಂಡಿಯಾದ ಪ್ರಕಟವಾಗಿದೆ. ತಂಡದಲ್ಲಿ ಯುವ ಆಟಗಾರ ರಿಂಕು ಸಿಂಗ್ಗೆ ಸ್ಥಾನ ಸಿಗದಿದ್ದಕ್ಕೆ ಅವರ ಕುಟುಂಬ ತೀವ್ರ ನಿರಾಸೆಗೆ ಒಳಗಾಗಿದೆ.
ಮಂಗಳವಾರ (ಏಪ್ರಿಲ್ 30) 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿತು. ಇದರಲ್ಲಿ ರೋಹಿತ್ ಶರ್ಮ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ನೇಮಿಸಲಾಗಿದ್ದು, ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಸಹ ಆಯ್ಕೆ ಮಾಡಲಾಗಿದೆ. ಅಚ್ಚರಿ ಎಂಬಂತೆ ಕೆ.ಎಲ್. ರಾಹುಲ್, ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ಗೆ ಕೊಕ್ ಕೊಡಲಾಗಿದೆ.
ಐಪಿಎಲ್ನಲ್ಲಿ ಗಮನಾರ್ಹ ಸಾಧನೆ ಮಾಡಿರುವ ರಿಂಕು ಸಿಂಗ್ಗೆ ಟಿ20 ವಿಶ್ವಕಪ್ ಆಡುವ ಸಿಗುತ್ತದೆ ಎಂದು ಅವರ ಕುಟುಂಬ ಭಾವಿಸಿತ್ತು. ಆದರೆ, ಸ್ಥಾನ ಸಿಗದಿರುವುದಕ್ಕೆ ತುಂಬಾ ಬೇಸರಗೊಂಡಿದೆ.
ಈ ಬಗ್ಗೆ ರಿಂಕು ಸಿಂಗ್ ತಂದೆ ಖಾನ್ಚಂದ್ರ ಸಿಂಗ್ ಮಾತನಾಡಿ, ಟಿ20 ವಿಶ್ವಕಪ್ ಟೂರ್ನಿಗೆ ರಿಂಕು ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದೆವು. ಅಲ್ಲದೆ, ಅದನ್ನು ಆಚರಿಸಲು ಸಿಹಿತಿಂಡಿಗಳು ಮತ್ತು ಪಟಾಕಿಗಳನ್ನು ಸಹ ತಂದಿದ್ದೆವು. ಆದರೆ ನಮ್ಮ ನಿರೀಕ್ಷೆ ತಲೆಕೆಳಗಾಯಿತು. ಟೀಮ್ ಇಂಡಿಯಾ ಪ್ರಕಟವಾದ ಬಳಿಕ ರಿಂಕು ತನ್ನ ತಾಯಿಯೊಂದಿಗೆ ನಾನು ಆಯ್ಕೆಯಾಗಲಿಲ್ಲ ಎಂದು ದುಃಖದಿಂದ ಮಾತನಾಡಿದರು ಅಂತ ರಿಂಕು ತಂದೆ ನೋವಿನಿಂದಲೇ ಹೇಳಿದರು.
ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಭಾರತ ತಂಡ ಪ್ರಕಟಗೊಂಡಿದ್ದು, ಟೀಮ್ ಇಂಡಿಯಾ ತನ್ನ ಆಭಿಯಾನವನ್ನು ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.
ಟಿ-20 ವಿಶ್ವಕಪ್ಗಾಗಿ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ಅದರಂತೆ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. (ಏಜೆನ್ಸೀಸ್)
ಟಿ-20 ವಿಶ್ವಕಪ್ಗೆ ಭಾರತ ತಂಡ ಪ್ರಕಟ; ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್ಗೆ ಕೊಕ್