More

    ಚುನಾವಣೆಯ ಹೊಸ್ತಿಲಲ್ಲಿ ನಿವೃತ್ತಿಯ ಮಾತುಗಳನ್ನಾಡಿದ ವಸುಂಧರಾ ರಾಜೇ; ಕಾರಣ ಹೀಗಿದೆ

    ಜೈಪುರ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ವಾಕ್ಸಮರ ಮುಗಿಲು ಮುಟ್ಟಿದೆ. ಇನ್ನು ಚುನಾವಣೆಯ ಹೊಸ್ತಿಲಲ್ಲಿ ಮಾಜಿ ಸಿಎಂ ವಸುಂಧರಾ ರಾಜೇ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ.

    ರಾಜಸ್ಥಾನದ ಜಲಾವರ್​ಪಟನ್​ನಲ್ಲಿ ನಾಮಪತ್ರ ಸಲ್ಲಿಸಿ ಸಾರ್ವಜನಿಕರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ವಸುಂಧರಾ ರಾಜೇ, ನನ್ನ ಮಗ ಮಾಡಿದ ಭಾಷಣ ಕೇಳಿ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದು ಸೂಕ್ತ ಎನ್ನಿಸುತ್ತಿದೆ. ನನ್ನ ಮಗ ಅನೇಕ ವರ್ಷಗಳಿಂದ ಸಂಸತ್​ ಪ್ರತಿನಿಧಿಯಾಗಿದ್ದು, ಆತ ನನ್ನ ಬಗ್ಗೆ ಆಡಿದ ಮಾತುಗಳನ್ನು ಕೇಳಿ ನಿವೃತ್ತಿಯಾಗುವುದು ಸೂಕ್ತ ಎಂದೆನ್ನಿಸಿದೆ.

    ಹಿಂದೆ ಜನ ಜಲಾವರ್​ ಬರನ್​ನಲ್ಲಿ ಬಂದು ಹೂಡಿಕೆ ಮಾಡಲು ಹಿಂದೇಟು ಹಾಕುತ್ತಿದ್ದರು. ಆದರೆ, ಈಗ ನಾ ಮುಂದು ತಾ ಮುಂದು ಎಂಬಂತೆ ಇಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದ್ದಾರೆ. ರಾಜ್ಯವನ್ನು ಅಭಿವೃದ್ದಿ ವಿಚಾರದಲ್ಲಿ ಮತ್ತೊಮ್ಮೆ ನಂಬರ್​ ಒನ್​ ಮಾಡಬೇಕಿದ್ದರೆ ಜನತೆ ಬಿಜೆಪಿಗೆ ಮತ ಹಾಕಿ ಭ್ರಷ್ಟ ಕಾಂಗ್ರೆಸ್​ ಸರ್ಕಾರವನ್ನು ತೊಲಗಿಸಬೇಕು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಸ್ಮರಣೀಯ ಶತಕ; ಕ್ರಿಕೆಟ್ ದಿಗ್ಗಜನ ದಾಖಲೆ ಸರಿಗಟ್ಟಿದ್ದ ರಚಿನ್

    ಇತ್ತ ಮಾಜಿ ಸಿಎಂ ವಸುಂಧರಾ ರಾಜೇ ಹಾಗೂ ಅವರ ಆಪ್ತರನ್ನು ಬಿಜೆಪಿ ಹೈಕಮಾಂಡ್​ ಕಡೆಗಣಿಸುತ್ತಿದೆ ಎಂಬ ಆರೋಪದ ಬೆನ್ನಲ್ಲೇ ಈ ಹೇಳಿಕೆ ಹೊರಬಂದಿದ್ದು, ಬಿಜೆಪಿ ಪಾಲಿಗೆ ವರವಾಗಲಿದೆಯೋ ಅಥವಾ ಮಗ್ಗಲಮುಳ್ಳಾಗಿ ಪರಿಣಮಿಸಲಿದೆಯೋ ಕಾದು ನೋಡಬೇಕಿದೆ.

    ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts