More

    ನನಗೂ ಸ್ವಾಭಿಮಾನ ಇದೆ, ನೈತಿಕತೆ ಇದೆ; ಅಭಿವೃದ್ಧಿ ಮಾಡಿ ತೋರಿಸುತ್ತೇನೆ: ಮಾಜಿ ಸಿಎಂ ಶೆಟ್ಟರ್​

    ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸೇರಿಕೊಳ್ಳುವುದಿಲ್ಲ ಎಂದು ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್, ಇಂದು ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

    ಇಂದು ಹುಬ್ಬಳ್ಳಿಯಲ್ಲಿ ಆರ್​ಎಸ್​ಎಸ್​ ಕಚೇರಿಯಲ್ಲಿ ಮುಖಂಡರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟ ಸೇರುವ ಕುರಿತು ತಮಗಿರುವ ಅಸಮಾಧಾನವನ್ನು ಮತ್ತೆ ವ್ಯಕ್ತಪಡಿಸಿದರು.

    ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಮುಂದುವರಿಯಲು ಸಾಧ್ಯವಿಲ್ಲ. ಸ್ವಾಭಿಮಾನ ಬಿಟ್ಟು ಹೇಗೆ ಸಂಪುಟ ಸೇರಲಿ? ನನಗೂ ಸ್ವಾಭಿಮಾನ ಹಾಗೂ ನೈತಿಕತೆ ಇದೆ. ಸದ್ಯ ನಾನು ಶಾಸಕನಿದ್ದೇನೆ. ಮಂತ್ರಿ ಆಗದಿದ್ದರೂ ಅಭಿವೃದ್ಧಿ ಮಾಡಬಹುದು, ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಜಗದೀಶ್​ ಶೆಟ್ಟರ್ ಹೇಳಿದರು.

    ಕೊನೆಯ ಕ್ಷಣದಲ್ಲಿ ಮಾಜಿ ಸಿಎಂ ಶೆಟ್ಟರ್​ ಭೇಟಿ ಕೈಬಿಟ್ಟ ಸಿಎಂ ಬೊಮ್ಮಾಯಿ!

    ಸಂಪುಟ ರಚನೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದ ಬಿಎಸ್​​ವೈ ವಲಸಿಗರ ಬಗ್ಗೆ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts