More

    ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಎಎಸ್​ ಅಧಿಕಾರಿ ಮಂಜುನಾಥ್ ಬಂಧನ

    ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೀಡಾಗಿ ಮೊನ್ನೆಮೊನ್ನೆಯಷ್ಟೇ ಎತ್ತಂಗಡಿ ಆಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಇಂದು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಮೂಲಕ ಇಂದು ರಾಜ್ಯ ಮತ್ತೊಂದು ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ.

    ಪಿಎಸ್​ಐ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಎಡಿಜಿಪಿ ಅಮೃತ್ ಪೌಲ್​ ಬಂಧನ ನಡೆದು, ರಾಜ್ಯದ ಜನರು ಕುತೂಹಲದಿಂದ ನೋಡುತ್ತಿದ್ದ ಬೆನ್ನಿಗೇ ಮತ್ತೊಬ್ಬ ಉನ್ನತಾಧಿಕಾರಿಯ ಬಂಧನವಾಗಿದೆ. ಐಎಎಸ್​ ಅಧಿಕಾರಿ ಜೆ. ಮಂಜುನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದರು.

    ಇದನ್ನೂ ಓದಿ: ಜನಪ್ರತಿನಿಧಿಗಳನ್ನು ಪ್ರಶ್ನಿಸಲಾರಂಭಿಸಿದ ಸಾರ್ವಜನಿಕರು; ಇಂದು ಮತ್ತೊಬ್ಬ ಶಾಸಕರನ್ನು ತರಾಟೆಗೆ ತಗೊಂಡ ಜನರು..

    ಭೂವ್ಯಾಜ್ಯ ಸಂಬಂಧ ಮಂಜುನಾಥ್ ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇವರ ವಿರುದ್ಧ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಇವರನ್ನು ಮೂರನೇ ಆರೋಪಿಯಾಗಿ ಕೇಸು ದಾಖಲಿಸಿಕೊಳ್ಳಲಾಗಿದೆ. ಇದೇ ಕಾರಣಕ್ಕೆ ಇವರನ್ನು ಎರಡು ದಿನಗಳ ಹಿಂದೆ ಎತ್ತಂಗಡಿ ಮಾಡಿ, ಇಂಟೆಗ್ರೇಟೆಡ್​ ಚೈಲ್ಡ್​ ಪ್ರೊಟೆಕ್ಷನ್​ ಸ್ಕೀಮ್​ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿತ್ತು. ಅಲ್ಲದೆ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಅವರನ್ನು ನೇಮಕ ಮಾಡಲಾಗಿತ್ತು. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಕಚೇರಿಗೆ ವಿಚಾರಣೆಗೆಂದು ಕರೆಸಿದ್ದ ಅಧಿಕಾರಿಗಳು, ನಂತರ ಇವರನ್ನು ಬಂಧಿಸಿದ್ದಾರೆ.

    ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ

    ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕನ ಬಂಧನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts