ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ!

ಬೆಂಗಳೂರು: ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ವಿಜಯಶಂಕರ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಐಎಂಎ ಜುವೆಲ್ಲರಿ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಇಂದು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಐಎಂಎ ಕಂಪನಿಯಿಂದ ಒಂದೂವರೆ ಕೋಟಿ ರೂ. ಲಂಚ ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ತನಿಖಾ ತಂಡ ಕಳೆದ ವರ್ಷ ಜುಲೈ 8ರಂದು ಬಂಧಿಸಿತ್ತು. … Continue reading ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ!