ಪೊಲೀಸ್ ಗೌರವಗಳೊಂದಿಗೆ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅಂತ್ಯಕ್ರಿಯೆಗೆ ಸರ್ಕಾರದ ಆದೇಶ

ಬೆಂಗಳೂರು: ಖ್ಯಾತ ಪ್ರವಚನಕಾರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರ ನಿಧನಕ್ಕೆ ಸರ್ಕಾರ ಸಂತಾಪ ವ್ಯಕ್ತಪಡಿಸಿದ್ದು, ಪೊಲೀಸ್ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಆದೇಶಿಸಿದೆ. ಖ್ಯಾತ ಪ್ರವಚನಕಾರರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಶ್ರೀ ಇಬ್ರಾಹಿಂ ಸುತಾರ ಅವರು ಬಾಗಲಕೋಟೆಯ ಮಹಾಲಿಂಗಪುರದಲ್ಲಿ ಫೆ. 5ರಂದು ನಿಧನರಾಗಿದ್ದು, ಅವರ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್​ ಗೌರವಗಳೊಂದಿಗೆ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕನಿಷ್ಠ ಪೊಲೀಸ್​ ಸಿಬ್ಬಂದಿಗಳನ್ನು ನಿಯೋಜಿಸಿ ಕೋವಿಡ್​ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಆದೇಶಿಸಲಾಗಿದೆ … Continue reading ಪೊಲೀಸ್ ಗೌರವಗಳೊಂದಿಗೆ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅಂತ್ಯಕ್ರಿಯೆಗೆ ಸರ್ಕಾರದ ಆದೇಶ