ಇಡುಕ್ಕಿ: ಮುನ್ನಾರ್ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರಗೆ ತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಆಗಸ್ಟ್ 7ರಂದು ಈ ಭೀಕರ ಭೂಕುಸಿತ ಸಂಭವಿಸಿದೆ. ಅಂದಿನಿಂದಲೂ ಎನ್ಡಿಆರ್ಎಫ್ ಸಿಬ್ಬಂದಿ ಸೇರಿ ಹಲವರು ಮಣ್ಣಿನಡಿ ಇರುವ ಶವಗಳನ್ನು ತೆಗೆಯುವ ಕಾರ್ಯಾಚರಣೆ ನಡೆಸುತ್ತಿವೆ. ದಿನೇದಿನೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕೇಂದ್ರ ಸಚಿವ ವಿ. ಮುರಳಿಧರನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಕುಸಿತದಲ್ಲಿ ಮೃತರಾದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
ಇವರೆಲ್ಲ ಟೀ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದರು. ಅಲ್ಲಿದ್ದ ಸಾಲುಸಾಲು ಮನೆಗಳು ನೆಲಸಮವಾಗಿದ್ದು ದುರಂತವೇ ಸರಿ. ಕೇರಳ ಮುಂದುವರಿದ ರಾಜ್ಯ. ಆದರೆ ಈ ಕಾರ್ಮಿಕರ ಸಾವು ಸರ್ಕಾರದ ಕಣ್ಣು ತೆರೆಸುವಂತಿದೆ. ಇನ್ನಾದರೂ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತದೆ ನಂಬಿಕೆ ನನಗೆ ಇದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: ಜೋಡಿ ದುರಂತ ಕೇರಳಕ್ಕೆ ಆಘಾತ: 2 ಹೋಳಾದ ವಿಮಾನ, ಭೂಕುಸಿತಕ್ಕೆ 13 ಮಂದಿ ಜೀವಂತ ಸಮಾಧಿ
ಮೃತರ ಕುಟುಂಬಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾಗೇ ಪ್ರಧಾನಿ ಮೋದಿಯವರೂ ಸಹ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.
ಇಡುಕ್ಕಿಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಯಾವುದೇ ಸಹಾಯ ಬೇಕಿದ್ದರೂ ನಾವು ಮಾಡಲು ಸಿದ್ಧರಿದ್ದೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳಿನಿಸ್ವಾಮಿ ಹೇಳಿದ್ದಾರೆ. (ಏಜೆನ್ಸೀಸ್)
ಮುನ್ನಾರ್ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 23ಕ್ಕೆ ಏರಿಕೆ; ಅವಶೇಷದಡಿಯಿಂದ 5 ಶವಗಳು ಹೊರಕ್ಕೆ